ಬೆಂಗಳೂರು: ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸವನ್ನಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿ, ಲಾಂಛನ ಬಿಡುಗಡೆ ಮಾಡುವ ಕಾರ್ಯಕ್ರಮ ಇಂದು ನಡೆಯಿತು.
ಉಪಮುಖ್ಯಮಂತ್ರಿ, ಮಾಹಿತಿ ತಂತ್ರಜ್ಞಾನ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ವಿಧಾನಸೌಧದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಅಭಿಯಾನದ ಲಾಂಛನವನ್ನು ಲೋಕಾರ್ಪಣೆ ಮಾಡಿದರು.
ಸೈಬರ್ ಸೆಕ್ಯೂರಿಟಿ ಮೂಲಕ ರಾಜ್ಯದಲ್ಲಿ ಜನರು ಬಳಸುವ ಮೊಬೈಲ್, ಲ್ಯಾಪ್ಟಾಪ್, ಡೆಸ್ಕ್ ಟಾಪ್ ಸೇರಿದಂತೆ ಇನ್ನಿತರ ವಸ್ತುಗಳಿಗೆ, ಅವುಗಳ ಡಾಟಾಗಳಿಗೆ ಅನ್ಆಥರೈಸ್ಡ್ ಸಮಸ್ಯೆಗಳಿಂದ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಈ ಮಾಸಾಚರಣೆ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ನಂತಹ ಸಮಸ್ಯೆಗಳು ದೇಶದಲ್ಲಿ ಹೆಚ್ಚುತ್ತಿದ್ದು, ಉಗ್ರವಾದಿಗಳು ಸೇರಿದಂತೆ ಇನ್ನಿತರ ದುಷ್ಕೃತ್ಯಗಳಿಗಾಗಿ ಬಳಕೆಯಾಗುತ್ತಿದೆ. ಸೈಬರ್ ಕ್ರೈಮ್ ಗಳಿಂದ ದೇಶಕ್ಕಾಗುತ್ತಿರುವ ಅಪಾಯವನ್ನು ಮನಗಂಡು ಈ ಮಾಸಾಚರಣೆಯ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಭದ್ರತೆ, ಸುರಕ್ಷತೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ.
ಸೈಬರ್ ಭದ್ರತೆ ಮತ್ತು ಸುರಕ್ಷಿತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಮಾಸಾಚರಣೆ ಅಭಿಯಾನ ಆರಂಭ ಮಾಡಲಾಗಿದೆ. ಜೊತೆಗೆ ಸರ್ಕಾರಿ, ಸರ್ಕಾರೇತರ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಲ್ಲಿ ಸೈಬರ್ ಕ್ರೈಮ್ ಬಗ್ಗೆ ಅರಿವು ಮೂಡಿಸುವ ಮೂಲಕ ಜಾಗೃತರನ್ನಾಗಿ ಮಾಡಲು, ಜೊತೆಗೆ ಅತ್ಯುತ್ತಮ ಜಾಗತಿಕ ಅಭ್ಯಾಸಗಳನ್ನು ಜನಸಮುದಾಯದ ವರೆಗೆ ತರುವ ನಿಟ್ಟಿನಲ್ಲಿ ಸೈಬರ್ ಸುರಕ್ಷತಾ ಮಾಸಾಚರಣೆ ಆಚರಿಸಲಾಗುತ್ತದೆ ಎಂದು ಸರ್ಕಾರ ಈ ಸಂಬಂಧ ಮಾಹಿತಿ ನೀಡಿದೆ.
WATCH LIVE! Inauguration of October cyber security awareness month programme. https://t.co/ZJQbVNfa7y
— Dr. Ashwathnarayan C. N. (@drashwathcn) October 5, 2020
Inaugurated the Cybersecurity Awareness Month Program conducted by @CySecKCoE & @KtechiH to spread cybersafety awareness among state government employees. We also unveiled mascots, Rakshaka & Bhakshaka, who will be innovatively used to make the public more cyber aware.
1/4 pic.twitter.com/g1ByjYzpm6— Dr. Ashwathnarayan C. N. (@drashwathcn) October 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.