ನವದೆಹಲಿ: ಯಾವುದೇ ಅಪಾಯವನ್ನು ಎದುರಿಸಲು ಭಾರತೀಯ ವಾಯುಪಡೆಯು ಉತ್ತಮ ನಿಯೋಜನಾ ಸ್ಥಿತಿಯಲ್ಲಿದೆ ಮತ್ತು ಭದ್ರತಾ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸಂಬಂಧಿತ ಕ್ಷೇತ್ರಗಳಲ್ಲಿ ಬಲವಾದ ನಿಯೋಜನೆಗಳನ್ನು ಮಾಡಲಾಗಿದೆ ಎಂದು ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಸೋಮವಾರ ಹೇಳಿದ್ದಾರ.
ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಅಕ್ಟೋಬರ್ 8 ರಂದು ವಾಯುಪಡೆಯ ದಿನಾಚರಣೆಯ ಮುನ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಏರ್ ಚೀಫ್ ಮಾರ್ಷಲ್ ಭದೌರಿಯಾ, ಚೀನಾದ ವಾಯು ಶಕ್ತಿಯು ಭಾರತದ ಸಾಮರ್ಥ್ಯಗಳಿಗಿಂತ ಉತ್ತಮವಾಗಿರಲು ಸಾಧ್ಯವಿಲ್ಲ. ಆದರೆ ನಾವು ಎದುರಾಳಿಯನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಯುದ್ಧ ಸನ್ನಿವೇಶ ಉಂಟಾದರೆ ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಎರಡು-ಮುಂಭಾಗದ ಯುದ್ಧವನ್ನು ಎದುರಿಸಲು ಐಎಎಫ್ ಸಿದ್ಧವಾಗಿದೆ ಎಂದು ಅವರು ಹೇಳಿದರು. “ಯಾವುದೇ ಆಕಸ್ಮಿಕತೆಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂಬುದರಲ್ಲಿ ಅನುಮಾನವಿಲ್ಲ” ಎಂದು ಪೂರ್ವ ಲಡಾಖ್ನ ಪರಿಸ್ಥಿತಿ ಮತ್ತು ಈ ಪ್ರದೇಶದಲ್ಲಿ ಚೀನಾದಿಂದ ಉಂಟಾಗುವ ಬೆದರಿಕೆಯ ಬಗೆಗಿನ ಪ್ರಶ್ನೆಗೆ ಐಎಎಫ್ ಮುಖ್ಯಸ್ಥರು ಉತ್ತರಿಸಿದ್ದಾರೆ.
“ನಾವು ಎಲ್ಲಾ ಸಂಬಂಧಿತ ಕ್ಷೇತ್ರಗಳಲ್ಲಿ ನಿಯೋಜನೆ ಮಾಡಿದ್ದೇವೆ. ಇದರಲ್ಲಿ ಲಡಾಖ್ ಒಂದು ಸಣ್ಣ ಭಾಗವಾಗಿದೆ” ಎಂದು ಅವರು ಹೇಳಿದರು.
ರಫೆಲ್ ಜೆಟ್ಗಳ ಸೇರ್ಪಡೆ ನಮಗೆ ಕಾರ್ಯಾಚರಣೆಯಲ್ಲಿ ಬಲ ನೀಡಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.