ಲಕ್ನೋ: ವಿರೋಧ ಪಕ್ಷಗಳು ಗಲಭೆಗೆ ಪ್ರಚೋದನೆ ನೀಡಲು ಮತ್ತು ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೊಸ ಹೊಸ ಪಿತೂರಿಗಳನ್ನು ನಡೆಸುತ್ತಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಟೀಕೆಗೆ ಅವರು ಈ ರೀತಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳಿಗೆ ರಾಜ್ಯದ ಅಭಿವೃದ್ಧಿಗೆ ಅಡ್ಡಗಾಲು ಹಾಕುವುದೇ ಕೆಲಸವಾಗಿದೆ. ಅದಕ್ಕಾಗಿ ಜನರನ್ನು ಜಾತಿ, ಕೋಮು ಮೊದಲಾದ ವಿಚಾರದಲ್ಲಿ ಜನರ ದಾರಿ ತಪ್ಪಿಸಿ ದಂಗೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಯೋಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂತಹ ಸಂಘರ್ಷಗಳನ್ನು ಸೃಷ್ಟಿಸಿ ಅದರಿಂದ ಪ್ರಚಾರ ಪಡೆಯುವ ನೀಚತನವನ್ನು ವಿಪಕ್ಷಗಳು ಮಾಡುತ್ತಿವೆ. ಇಂತಹ ಮನಸ್ಥಿತಿ ಅಭಿವೃದ್ಧಿಗೆ ಮಾರಕ. ಹಾಗಾಗಿ ನಾವು ಎಚ್ಚರ ವಹಿಸಬೇಕು. ಹಾಗೆಯೇ ಅಭಿವೃದ್ಧಿ ಕೆಲಸಗಳಿಗೆ ಮತ್ತಷ್ಟು ವೇಗ ನೀಡಬೇಕು ಎಂದೂ ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವಸಿಂಗ್, ಕಾಂಗ್ರೆಸ್ ಪಕ್ಷ ಸೇರಿದಂತೆ ಇನ್ನಿತರ ವಿರೋಧಿಗಳು ಸುಳ್ಳು, ವಂಚನೆಯ ಮೂಲಕ ಜನರ ಹಾದಿ ತಪ್ಪಿಸಲು ಪ್ರಯತ್ನ ಮಾಡುತ್ತಿವೆ. ಆದರೆ ಅವರ ಆಡಳಿತ ಹೇಗಿತ್ತು, ಅವರು ಸಾರ್ವಜನಿಕ ಆಸ್ತಿಯನ್ನು ಹೇಗೆ ಲಪಟಾಯಿಸಿದ್ದಾರೆ ಎಂಬುದನ್ನು ಈ ಹಿಂದೆಯೇ ಇಲ್ಲಿನ ಜನತೆ ಅರಿತುಕೊಂಡಿದ್ದಾರೆ. ಅಂತಹವರ ಪಿತೂರಿಯನ್ನು ಕೆಡವಲು ಸಜ್ಜಾಗಬೇಕಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.