ನವದೆಹಲಿ: ‘ಸ್ವದೇಶ ದರ್ಶನ’ ಯೋಜನೆಯಡಿ ಬೌದ್ಧಧರ್ಮಕ್ಕೆ ಸಂಬಂಧಿಸಿದ ಕೌಶಂಬಿ ಸೇರಿದಂತೆ ವಿವಿಧ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸಲು ಮತ್ತು ಇವುಗಳನ್ನು ಬೌದ್ಧ ಸರ್ಕ್ಯೂಟ್ನೊಂದಿಗೆ ಸಂಪರ್ಕಿಸಲು ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಯೋಜಿಸಿದೆ.
ಈ ನಿಟ್ಟಿನಲ್ಲಿ 50 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಅನುಮೋದನೆಗೆ ಕಳುಹಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ದಿನೇಶ್ ಸಿಂಗ್ ತಿಳಿಸಿದ್ದಾರೆ.
ಧಾರ್ಮಿಕ ಮತ್ತು ಐತಿಹಾಸಿಕ ಪ್ರಾಮುಖ್ಯತೆಯ ಹಲವಾರು ತಾಣಗಳ ವಾಸೋದ್ಯಮ, ಅರಣ್ಯ, ವಿದ್ಯುತ್, ಆದಾಯ ಸೇರಿದಂತೆ ವಿವಿಧ ಇಲಾಖೆಗಳು ನಡೆಸಿದ ವಿಸ್ತೃತ ಸಮೀಕ್ಷೆಯನ್ನು ಆಧರಿಸಿ ಈ ಪ್ರಸ್ತಾಪವನ್ನು ಕಳುಹಿಸಲಾಗಿದೆ.
ಬೌದ್ಧ ಸರ್ಕ್ಯೂಟ್ ಬುದ್ಧ ಹುಟ್ಟಿದ ನೇಪಾಳದ ಲುಂಬಿನಿಯಿಂದ ಗೌತಮ ಬುದ್ಧನ ಹೆಜ್ಜೆಗಳನ್ನು ಅನುಸರಿಸುತ್ತದೆ, ಆತ ಜ್ಞಾನೋದಯವನ್ನು ಕಂಡ ಬಿಹಾರದ ಗಯಾ, ಆತ ಮೊದಲು ಧರ್ಮೋಪದೇಶವನ್ನು ನೀಡಿದ ಸಾರನಾಥ್ ಮತ್ತು ಆತ ನಿಧನನಾದ ಕುಶಿನಗರವನ್ನು ಇದು ಒಳಗೊಂಡಿದೆ.
ಗೌತಮ್ ಬುದ್ಧನು ತನ್ನ ಅನುಯಾಯಿಗಳಿಗೆ ಧರ್ಮೋಪದೇಶವನ್ನು ನೀಡಲು ಹಲವಾರು ಬಾರಿ ಕೌಶಂಬಿ ಪಟ್ಟಣಕ್ಕೆ ಭೇಟಿ ನೀಡಿದ್ದ ಎಂಬ ಪ್ರತೀತಿ ಇದೆ.
ಜಿಲ್ಲೆಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಲು ಕೌಶಂಬಿಯ ವಿವಿಧ ಪ್ರಾಚೀನ ಮತ್ತು ಐತಿಹಾಸಿಕ ಸ್ಥಳಗಳನ್ನು ಹೇಗೆ ಸಂರಕ್ಷಿಸಬಹುದು ಮತ್ತು ಅಭಿವೃದ್ಧಿಪಡಿಸಬಹುದು ಎಂಬುದನ್ನು ಈ ಪ್ರಸ್ತಾಪವು ವಿವರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.