ಮಡಿಕೇರಿ: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನಗಳಿಗೆ ಜನರ ಸಹಕಾರ ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಅವರು ನಗರದಲ್ಲಿ ಕೊರೋನಾ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳ ಜೊತೆಗೆ ಚರ್ಚಿಸಿದರು.
ಕೊರೋನಾ ಸೋಂಕಿಗೆ ಔಷಧ ಪತ್ತೆಯಾಗುವವರೆಗೆ ಮಾಸ್ಕ್ ಧರಿಸುವುದು ಕಡ್ಡಾಯ. ಜನರು ಈ ನಿಯಮವನ್ನು ಮುರಿದ ಪಕ್ಷದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ. ಅದರನ್ವಯ ಪೊಲೀಸರು ಮಾಸ್ಕ್ ಬಳಕೆ ಮಾಡದವರಿಗೆ ದಂಡ ವಿಧಿಸುತ್ತಿದ್ದಾರೆ. ಆದ್ದರಿಂದ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೋನಾದಿಂದ ರಕ್ಷಣೆ ಮಾಡಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದ್ದಾರೆ.
ಕೊರೋನಾ ತಡೆಗೆ ಜನರು ಸರ್ಕಾರದ ನಿಯಮಗಳನ್ನು ಪಾಲಿಸುವುದು ಅಗತ್ಯ. ಇಲ್ಲವಾದಲ್ಲಿ ಕೊರೋನಾ ತಡೆ ಅಸಾಧ್ಯ. ಲಾಕ್ಡೌನ್ ಅವಧಿಯಲ್ಲಿ ಕೊಡಗು ಕೊರೋನಾ ವಿಚಾರದಲ್ಲಿ ಹಸಿರು ವಲಯ ಎಂದು ಘೋಷಿಸಲ್ಪಟ್ಟಿತ್ತು. ಆದರೆ ಅನ್ಲಾಕ್ ಬಳಿಕ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದ್ದರಿಂದ ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿ ಮಾಡಬೇಕು ಎಂದೂ ಅವರು ತಿಳಿಸಿದ್ದಾರೆ.
ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಉದ್ಘಾಟನೆ ಸದ್ಯದಲ್ಲೇ ನಡೆಯಲಿದೆ. ಇಲ್ಲಿ ನಡೆದ ಪ್ರಾಕೃತಿಕ ವಿಕೋಪಗಳನ್ನು ಜನಪ್ರತಿನಿಧಿಗಳು, ಜಿಲ್ಲಾಡಳಿತ, ಅಧಿಕಾರಿಗಳು ಸೂಕ್ತವಾಗಿ ನಿರ್ವಹಣೆ ಮಾಡಿದ್ದು ಪ್ರಶಂಸನಾರ್ಹ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.