ನವದೆಹಲಿ: ಭಾರತ ಮತ್ತು ಮಯನ್ಮಾರ್ ತಮ್ಮ ಬಾಂಧವ್ಯವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಉಭಯ ದೇಶಗಳು ಸೋಮವಾರ ಮಾತುಕತೆಯನ್ನು ನಡೆಸಿ ಹಲವು ವಿಷಯಗಳ ಬಗ್ಗೆ ಚರ್ಚಿಸಿವೆ.
ಮಯನ್ಮಾರಿನ ಎರಡನೇ ಅತಿ ದೊಡ್ಡ ನಗರ ಮಂಡಾಲಯದಲ್ಲಿ ಲೋಕಮಾನ್ಯ ತಿಲಕರ ಪುತ್ಥಳಿಯನ್ನು ನಿರ್ಮಾಣ ಮಾಡುವ ಬಗ್ಗೆ ಚರ್ಚೆ ನಡೆದಿದೆ. ತಿಲಕರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪುತ್ಥಳಿ ಅನಾವರಣಗೊಳ್ಳುವ ನಿರೀಕ್ಷೆಯಿದೆ. ಮಂಡಾಲಯ ಜೈಲಿನಲ್ಲಿದ್ದ ಸಂದರ್ಭದಲ್ಲಿ ತಿಲಕರು ಭಗವದ್ಗೀತೆಯ ನಿರೂಪಣೆ ‘ಗೀತ ರಹಸ್ಯ’ವನ್ನು ಬರೆದಿದ್ದರು.
ಮಾತ್ರವಲ್ಲದೆ ಭಾರತವು ಮಯನ್ಮಾರಿನ ಸಾಂಸ್ಕೃತಿಕ ಪರಂಪರೆಗಳನ್ನು ಸಂರಕ್ಷಣೆ ಮಾಡುವುದಕ್ಕೂ ನೆರವಿನ ಹಸ್ತವನ್ನು ನೀಡುತ್ತಿದೆ. ಇದಕ್ಕಾಗಿ ಭಾರತಕ್ಕೆ ಅದು ಧನ್ಯವಾದಗಳನ್ನು ಅರ್ಪಣೆ ಮಾಡಿದೆ.
ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಸುಮಾರು 22 ಮಂದಿ ಬಂಡುಕೋರರನ್ನು ಸೋಮವಾರ ಮಯನ್ಮಾರ್ ಭಾರತಕ್ಕೆ ಹಸ್ತಾಂತರ ಮಾಡಿದೆ. ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.