ನವದೆಹಲಿ: ಭಿನ್ನಾಭಿಪ್ರಾಯವನ್ನು ಪ್ರದರ್ಶಿಸಲು ಯಾವುದೇ ವ್ಯಕ್ತಿ ಅಥವಾ ಗುಂಪು ಸಾರ್ವಜನಿಕ ಸ್ಥಳಗಳನ್ನು ಅಥವಾ ಸಾರಿಗೆ ಮಾರ್ಗಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಶಹೀನ್ ಬಾಗ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರತಿಭಟಿಸುವ ಹಕ್ಕಿನ ಮಾರ್ಗಸೂಚಿಗಳು ಮತ್ತು ಇತರ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳನ್ನು ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ. ನಾಗರಿಕ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ವಿರೋಧಿಸಲು ಜನರ ಗುಂಪು ರಸ್ತೆ ತಡೆದು ತಿಂಗಳುಗಟ್ಟಲೆ ಪ್ರತಿಭಟನೆಯನ್ನು ನಡೆಸಿದ ಪರಿಣಾಮ ದೆಹಲಿ ಮತ್ತು ನೊಯ್ಡಾವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮುಚ್ಚಿ ಹೋಗಿತ್ತು. ಇದಕ್ಕೆ ಜನರಿಂದ ವಿರೋಧಗಳು ವ್ಯಕ್ತವಾಗಿದ್ದವು.
“ಪ್ರತಿಭಟನೆಯು ಗೊತ್ತುಪಡಿಸಿದ ಸ್ಥಳಗಳಲ್ಲಿರಬೇಕು. ಗೊತ್ತುಪಡಿಸದ ಸ್ಥಳಗಳಲ್ಲಿ ನಡೆಯುವ ಪ್ರತಿಭಟನೆಗಳನ್ನು ತಡೆಯಲು ಅಧಿಕಾರಿಗಳು ಮುಂದಾಗಬಹುದು” ಎಂದು ಸುಪ್ರೀಂಕೋರ್ಟ್ ಹೇಳಿದೆ.
“ಸಾರ್ವಜನಿಕ ಸ್ಥಳಗಳು ಅಥವಾ ರಸ್ತೆಗಳನ್ನು ಪ್ರತಿಭಟನಾಕಾರರು ಆಕ್ರಮಿಸಿಕೊಳ್ಳುವುದರಿಂದ ಹೆಚ್ಚಿನ ಸಂಖ್ಯೆಯ ಜನರಿಗೆ ಅನಾನುಕೂಲತೆಯನ್ನುಂಟಾಗುತ್ತದೆ ಮತ್ತು ಅವರ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆ. ಕಾನೂನಿನಡಿಯಲ್ಲಿ ಇದಕ್ಕೆ ಅನುಮತಿ ಇಲ್ಲ” ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಹೇಳಿದೆ.
ಶಾಂತಿಯುತ ಪ್ರತಿಭಟನೆಯು ಸಾಂವಿಧಾನಿಕ ಹಕ್ಕು ಮತ್ತು ಅದನ್ನು ಗೌರವಿಸಬೇಕಾಗಿದೆ ಎಂದು ಸುಪ್ರೀಂ ಹೇಳಿದೆ. ಆದರೆ ಪ್ರತಿಭಟನೆ ಮಾಡುವ ಜನರು ಪ್ರತಿಭಟನೆಯ ಸಮಯದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಬಳಸಿದ ವಿಧಾನಗಳನ್ನು ಈಗಲೂ ಬಳಸುವುದು ಉಚಿತವಲ್ಲ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.