ಬೆಂಗಳೂರು: ರಾಜ್ಯದಲ್ಲಿ ಸಂವೇದ ಇ-ಕ್ಲಾಸ್ ಪಾಠ ಸರಣಿಯ ಎರಡನೆಯ ಅವಧಿ ಅ. 12 ರಿಂದ ಆರಂಭವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
5,6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವೀಡಿಯೋ ಪಾಠಗಳು DSERT Jnanadeepa ಮತ್ತು Makkalavani ಯುಟ್ಯೂಬ್ ಚಾನೆಲ್ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಜೊತೆಗೆ ಚಂದನ ವಾಹಿನಿಯಲ್ಲಿಯೂ ಈ ತರಗತಿಗಳು ಮರುಪ್ರಸಾರವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೊರೋನಾ ಕಾರಣದಿಂದ ಇನ್ನೂ ಶಾಲಾರಂಭ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಚಂದನ ವಾಹಿನಿಯಲ್ಲಿ ಪ್ರತಿನಿತ್ಯ 4 ಗಂಟೆಯ ಅವಧಿಯಲ್ಲಿ ಪ್ರಥಮ ಹಂತದಲ್ಲಿ 8-10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಪಾಠ ಪ್ರಸಾರ ಮಾಡಲಾಗುತ್ತಿದೆ. ಇನ್ನುಳಿದ ಸಮಯದ ಲಭ್ಯತೆ ಆಧರಿಸಿ ಉಳಿದ ತರಗತಿಗಳ ಪಾಠ ಪ್ರಸಾರಕ್ಕೆ ರೂಪ ನೀಡುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಈ ಹಂತದಲ್ಲಿ ಶಿಕ್ಷಕರು ಮಕ್ಕಳ ಮೇಲೆ ಗಮನ ವಹಿಸಿ ಪಾಠ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಲು ಅವರು ಸೂಚನೆ ನೀಡಿದ್ದು, ಪಾಲಕರೂ ಗಮನ ಹರಿಸುವಂತೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.