ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ.
ಹತ್ರಾಸ್ನಲ್ಲಿ ನಡೆದಿದೆ ಎನ್ನಲಾದ ದಲಿತ ಬಾಲಕಿಯ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಇಡೀ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು, ಜಾತಿ ಹಿಂಸಾಚಾರವನ್ನು ಪ್ರಚೋದನೆ ಮಾಡುವ ನಿಟ್ಟಿನಲ್ಲಿ ಸಂಚು ರೂಪಿಸಲಾಗಿದ್ದು, ಇದಕ್ಕಾಗಿ 100 ಕೋಟಿ ರೂ. ಗಳಷ್ಟು ವಿದೇಶೀ ಫಂಡಿಂಗ್ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ತನಿಖೆಯಿಂದ ಕಂಡುಕೊಂಡಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಖಾತೆಗಳ ಮೂಲಕ ಈ ಹಣ ವರ್ಗಾವಣೆ ನಡೆದಿದೆ ಎಂದೂ ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಒಟ್ಟು ಹಣದಲ್ಲಿ 50 ಕೋಟಿ ರೂ.ಗಳಷ್ಟು ಮಾರಿಷಸ್ನಿಂದ ಹರಿದು ಬಂದಿದೆ ಎಂದು ಅಧಿಕಾರಿಗಳು ತನಿಖೆಯ ಸಂದರ್ಭದಲ್ಲಿ ಕಂಡುಕೊಂಡಿದ್ದಾರೆ. ಸದ್ಯ ಇಡಿ ಅಧಿಕಾರಿಗಳು ಈ ಹಣದ ಮೂಲ ಮತ್ತು ಉದ್ದೇಶ ಪತ್ತೆಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕವ ಸಂಬಂಧ ತನಿಖೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಮತ್ತು ಸೈಬರ್ ಸೆಲ್ ಅಧಿಕಾರಿಗಳಿಗೂ ಮಹತ್ವದ ಸುಳಿವುಗಳು ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಥುರಾದಲ್ಲಿ ನಾಲ್ಕು ಮಂದಿ ಪಿಎಫ್ಐ ನಂಟು ಹೊಂದಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ನವದೆಹಲಿಯ ಕೇರಳ ಮೂಲದ ಪತ್ರಕರ್ತ ಮತ್ತು ಮತ್ತೆ ಮೂವರು ಪಿಎಫ್ಐ ಜೊತೆಗೆ ನಂಟು ಹೊಂದಿದ್ದ ವ್ಯಕ್ತಿಗಳ ವಿರುದ್ಧ ದೇಶದ್ರೋಹದ ಪ್ರಕರಣವೂ ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.