ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ವಿದೇಶಗಳಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ದೇಶಕ್ಕೆ ಕರೆತರಲು ವಂದೇ ಭಾರತ್ ಮಿಷನ್ ಆರಂಭಿಸಲಾಗಿದ್ದು, ಆ ಮೂಲಕ ಈ ವರೆಗೆ ಸುಮಾರು 20 ಲಕ್ಷ ಭಾರತೀಯರನ್ನು ಸ್ವದೇಶಕ್ಕೆ ಕರೆತಂದಿರುವುದಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ.
ಈ ವಿಮಾನಗಳ ಮೂಲಕ ತೊಂದರೆಗೆ ಸಿಲುಕಿದ್ದ ಭಾರತೀಯರನ್ನು ಮಾತ್ರವೇ ಕರೆ ತರಲಾಗಿಲ್ಲ. ಅದರ ಜೊತೆಗೆ ಅನೇಕ ದೇಶಗಳಿಗೆ ಅನೇಕ ವೈದ್ಯಕೀಯ ನೆರವನ್ನು ಸಹ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುಮಾರು 120 ದೇಶಗಳಿಗೆ ಈ ವಿಮಾನಗಳ ಮೂಲಕ ಔಷಧಗಳ ನೆರವನ್ನು ರವಾನಿಸಿರುವುದಾಗಿಯೂ ಅವರು ತಿಳಿಸಿದ್ದಾರೆ. ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಜಗತ್ತಿನ ಬೇರೆ ಬೇರೆ ಭಾಗದಲ್ಲಿದ್ದ ಭಾರತೀಯರನ್ನು ಕರೆತರುವಲ್ಲಿ ಏರ್ ಇಂಡಿಯಾ ಪ್ರಮುಖ ಪಾತ್ರ ವಹಿಸಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ವಂದೇ ಭಾರತ್ ಮಿಷನ್ ಮೂಲಕ 64 ದೇಶಗಳಿಂದ 12,708 ಜನರನ್ನು ಸ್ವದೇಶಕ್ಕೆ ಕರೆ ತರಲಾಯಿತು. ಬಳಿಕ ಈ ಸಂಖ್ಯೆ ಏರಿಸಲಾಯಿತು. ಈ ಯೋಜನೆ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಸಿಕ್ಕ ಜಯ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.