ನವದೆಹಲಿ: ಸಂದರ್ಭ ಯಾವುದೇ ಇರಲಿ, ದೇಶದ ಭದ್ರತೆ, ಹಿತಾಸಕ್ತಿಗೆ ಸಂಬಂಧಿಸಿದಂತೆ ದೇಶದ ರಕ್ಷಣೆಯ ವಿಚಾರದಲ್ಲಿ ಭಾರತೀಯ ವಾಯುಪಡೆ ಸದಾ ಸಿದ್ಧವಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ರಾಕೇಶ್ ಸಿಂಗ್ ಭದೌರಿಯಾ ತಿಳಿಸಿದ್ದಾರೆ.
88 ನೇ ವಾಯುಪಡೆಯ ದಿನಾಚರಣೆಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಭಾರತೀಯ ವಾಯುಪಡೆಗೆ 89 ನೇ ವರ್ಷವಾಗುತ್ತಿದೆ. ಐಎಎಫ್ನಲ್ಲಿಯೂ ಅನೇಕ ಪರಿವರ್ತನೆಯ ಗಾಳಿ ಬೀಸುತ್ತಿದೆ. ಸದ್ಯ ಭಾರತೀಯ ವಾಯುಪಡೆ ಏರೋಸ್ಪೇಸ್ ಶಕ್ತಿಯನ್ನು ಬಳಸಿಕೊಳ್ಳುತ್ತಿದೆ ಮತ್ತು ಸಮಗ್ರ ಮಲ್ಟಿ ಡೊಮೇನ್ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಸದ್ಯ ಕೊರೋನಾ ಕರಿನೆರಳು ಇಡೀ ವಿಶ್ವವನ್ನು ಆವರಿಸಿದೆ. ಆದರೆ ಭಾರತ ಈ ಸಾಂಕ್ರಾಮಿಕ ಸೋಂಕನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ದೇಶವನ್ನು ಸಮರ್ಥವಾಗಿ ರಕ್ಷಿಸುವ ಶೌರ್ಯ ಭಾರತೀಯ ಯೋಧರಿಗಿದೆ ಎಂದು ಅವರು ಹೇಳಿದ್ದಾರೆ. ದೇಶದ ಹಿತಾಸಕ್ತಿ ಕಾಪಾಡಿಕೊಳ್ಳುವಲ್ಲಿ ವಾಯುಪಡೆ ಸದಾ ಸಿದ್ಧವಾಗಿದೆ ಎಂದೂ ಅವರು ತಿಳಿಸಿದ್ದಾರೆ. ಉತ್ತರದ ಗಡಿ ಭಾಗದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದ ಯೋಧರನ್ನು ಅವರು ಈ ಸಂದರ್ಭದಲ್ಲಿ ಪ್ರಶಂಸಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.