ನವದೆಹಲಿ: ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಬಲ ಪ್ರಯೋಗಿಸಿದೆ ಪಶ್ಚಿಮಬಂಗಾಳ ಪೊಲೀಸರ ವಿರುದ್ಧ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾನೂನು ಸಮರ ಸಾರಲು ಮುಂದಾಗಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಪೊಲೀಸರಿಗೆ ಸಾಂವಿಧಾನಿಕ ಸ್ವಾಮ್ಯದ ಪಾಠವನ್ನು ನಾವು ಕಲಿಸಿಕೊಡುತ್ತೇವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಪೊಲೀಸರ ವಿರುದ್ಧ ಹಕ್ಕು ಚ್ಯುತಿ ನಿರ್ಣಯ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಪ್ರತಿಭಟನಾನಿರತರ ಮೇಲೆ ನಾಡ ಬಾಂಬ್ ದಾಳಿ ವಿರುದ್ಧ ಎಫ್ಐಆರ್ ದಾಖಲಿಸಲು ತೆರಳಿದ್ದ ಮೂವರು ಬಿಜೆಪಿ ಸಂಸದರ ಮೇಲೆ ಜರಸಂಕೊ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೈ ಮಾಡಿದ್ದಾರೆ, ಇದರ ವಿರುದ್ಧ ಕಾನೂನು ಸಮರ ನಡೆಸುವುದಾಗಿ ತಿಳಿಸಿದ್ದಾರೆ.
“ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲು ಮಧ್ಯರಾತ್ರಿಯವರೆಗೆ ಕಾದು ಕುಳಿತಿದ್ದೆವು. ಅವರು ನಮಗೆ ಸಹಾಯ ಮಾಡುವ ಬದಲು ಮೂವರು ಸಂಸತ್ ಸದಸ್ಯರ ಮೇಲೆ ಕೈ ಮಾಡಿದ್ದಾರೆ. ನಾವು ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇವೆ ಮತ್ತು ಮಮತಾ ಬ್ಯಾನರ್ಜಿ ಅವರ ಪೊಲೀಸರಿಗೆ ಸಂವಿಧಾನದ ಪಾಠ ಕಲಿಸುತ್ತೇವೆ” ಎಂದಿದ್ದಾರೆ.
ಪಶ್ಚಿಮ ಬಂಗಾಳದ ಪೊಲೀಸ್ ಠಾಣೆಗಳು ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು ಆರೋಪಿಸಿದ ಅವರು, ದೊಡ್ಡ ಅಪರಾಧಕ್ಕೂ ಅವರು ಎಫ್ಐಆರ್ ದಾಖಲು ಮಾಡಲಿಲ್ಲ, ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದ್ದಾರೆ.
We waited for more than 2 hours, well into midnight, for police to register FIR upon our complaint.
They instead manhandled 3 Members of Parliament.
We will file a motion for breach of privilege & teach Mamata’s police a lesson in constitutional propriety.#MamataKaGoondaRaj pic.twitter.com/McCXb4skGS
— Tejasvi Surya (@Tejasvi_Surya) October 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.