ತಿರುವನಂತಪುರಂ: ಕೇರಳದಲ್ಲಿ ಮತ್ತೆ ರಾಜಕೀಯ ದ್ವೇಷ ಭುಗಿಲೆದ್ದಿದೆ. ಕೇರಳದ ಬಿಜೆಪಿ ನಾಯಕ ಹಾಗೂ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ ಅಬ್ದುಲ್ಲಕುಟ್ಟಿ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಈ ಘಟನೆಯು ಮಲಪುರಂನಲ್ಲಿ ನಡೆದಿದೆ. ಅಬ್ದುಲ್ಲಕುಟ್ಟಿ ಅವರ ಕಾರನ್ನು ಮತ್ತೊಂದು ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಗುದ್ದಿ ಈ ಕೃತ್ಯವನ್ನು ನಡೆಸಲಾಗಿದೆ. ಅದಕ್ಕೂ ಮುನ್ನ ಹೋಟೆಲ್ನಲ್ಲಿ ದುಷ್ಕರ್ಮಿಗಳು ಇವರ ಮೇಲೆ ಅನುಚಿತ ವರ್ತನೆ ತೋರಿಸಿದ್ದರು ಎನ್ನಲಾಗಿದೆ.
ಕೇರಳದ ಕಮ್ಯೂನಿಸ್ಟ್ ಗೂಂಡಾಗಳು ಬಿಜೆಪಿ ಕಾರ್ಯಕರ್ತರ ಮೇಲೆ ಮತ್ತು ಹಿಂದೂಪರ ಕಾರ್ಯಕರ್ತರ ಮೇಲೆ ನಿರಂತರವಾಗಿ ಮಿಂಚಿನ ದಾಳಿ ನಡೆಸುತ್ತಲೇ ಇದ್ದಾರೆ. ಆದರೂ ಅಲ್ಲಿನ ಪಿನರಾಯಿ ವಿಜಯನ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ.
ಕೇರಳದ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ.ಸುರೇಂದ್ರನ್ ಅವರು ಅಬ್ದುಲ್ಲಕುಟ್ಟಿ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. “ದ್ವೇಷದ ಪ್ರತಿಪಾದಕರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ಕಾರ್ಯಕರ್ತರು ತಮ್ಮ ರಾಷ್ಟ್ರೀಯ ಉಪಾಧ್ಯಕ್ಷನನ್ನು ರಕ್ಷಿಸಲು ದೃಢ ನಿಶ್ಚಯ ಹೊಂದಿದ್ದಾರೆ ಮತ್ತು ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸುವ ಎಲ್ಲಾ ಪ್ರಯತ್ನಗಳನ್ನು ವಿರೋಧಿಸುತ್ತಾರೆ ”ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.