ಮೈಸೂರು: ದೇಶದ ರೈತರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇತ್ತೀಚೆಗೆ ಜಾರಿಗೊಳಿಸಲಾದ ರೈತ ಮಸೂದೆಗಳು ಹೆಚ್ಚು ಮಹತ್ವದ್ದಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ.
ರೈತರ ಆದಾಯ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ರೈತರ ಅಭಿವೃದ್ಧಿಯ ಧ್ಯೇಯದೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ. ರೈತರು ಉತ್ತಮ ಆದಾಯ ಪಡೆಯಲು ಅಡ್ಡವಾಗಿದ್ದ ಹಲವು ಕಾನೂನುಗಳನ್ನು ಸರ್ಕಾರ ತಿದ್ದುಪಡಿ ಮಾಡಿ, ಸಕಾರಾತ್ಮಕ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಆಹಾರ ಅಭದ್ರತೆ ಇರುವ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಕೆಲವು ಕಾನೂನುಗಳು ರೈತರಿಗೆ ಸಮಸ್ಯೆ ಸೃಷ್ಟಿಸಿದ್ದವು. ಇದರಿಂದ ಮಧ್ಯವರ್ತಿ, ಉದ್ಯಮಿಗಳು, ಕೈಗಾರಿಕೆಗಳು ಲಾಭ ಪಡೆಯುತ್ತಿದ್ದರೇ ಹೊರತು ರೈತರಿಗೆ ಸರಿಯಾದ ಆದಾಯ ಪಡೆಯಲು ತೊಡಕಾಗಿತ್ತು. ಪ್ರಸ್ತುತ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂತಹ ರೈತರಿಗೆ ಉಪಯೋಗವಿಲ್ಲದ ಕಾನೂನುಗಳನ್ನು ತಿದ್ದುಪಡಿ ಮಾಡಿ ರೈತ ಸ್ನೇಹಿಯನ್ನಾಗಿಸಿದೆ. ಇದು ರೈತರ, ಕೃಷಿ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೆ ಪೂರಕವಾಗಿದೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.