ಜೈಪುರ: ರಾಜಸ್ಥಾನದಲ್ಲಿ ದೇಗುಲದ ಅರ್ಚಕರು ಒಬ್ಬರನ್ನು ಭೂ ಮಾಫಿಯಾದವರು ಜೀವಂತವಾಗಿ ಸುಟ್ಟು ಹತ್ಯೆಮಾಡಿದ್ದಾರೆ. ದೇಗುಲದ ಭೂಮಿಯನ್ನು ಆಕ್ರಮಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗಿದೆ.
ರಾಜಸ್ಥಾನದ ಕರೌಲಿ ಜಿಲ್ಲೆಯ ಬುಕ್ನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೀವ್ರವಾಗಿ ಸುಟ್ಟು ಹೋಗಿದ್ದ ಅರ್ಚಕರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅವರು ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.
ದೇಗಲಕ್ಕಾಗಿ ಸಮುದಾಯದವರು ನೀಡಿದ್ದ ಭೂಮಿಯಲ್ಲಿ ಅರ್ಚಕರು ಮನೆಯೊಂದನ್ನು ನಿರ್ಮಿಸಲು ಮುಂದಾಗಿದ್ದರು. ಆದರೆ ಭೂ ಮಾಫಿಯಾದವರಿಗೆ ಈ ಭೂಮಿಯ ಮೇಲೆ ಕಣ್ಣಿತ್ತು. ಹೀಗಾಗಿ ಆರು ಮಂದಿ ಇವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.