ನವದೆಹಲಿ: ಮುಂದಿನ ವರ್ಷ ಮಾರ್ಚ್ 31 ರವರೆಗೆ ತಲಾ 10,000 ಮೆಟ್ರಿಕ್ ಟನ್ ವರೆಗೆ ಬೆಂಗಳೂರು ಗುಲಾಬಿ ಈರುಳ್ಳಿ ಮತ್ತು ಕೃಷ್ಣಪುರಂ ಈರುಳ್ಳಿ ರಫ್ತು ಮಾಡಲು ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ.
ಆದರೂ, ಚೆನ್ನೈ ಬಂದರಿನ ಮೂಲಕ ಮಾತ್ರ ಈರುಳ್ಳಿಯನ್ನು ರಫ್ತು ಮಾಡಲಾಗುವುದು ಎಂಬ ಷರತ್ತಿನ ಮೇಲೆ ಎರಡು ಬಗೆಯ ಈರುಳ್ಳಿಯನ್ನು ರಫ್ತು ಮಾಡಲು ಅನುಮತಿ ನೀಡಲಾಗಿದೆ.
ಪ್ರಧಾನ ಬೆಲೆಗಳನ್ನು ತಗ್ಗಿಸಲು ಸರ್ಕಾರವು ಕಳೆದ ತಿಂಗಳು ಎಲ್ಲಾ ಬಗೆಯ ಈರುಳ್ಳಿ ರಫ್ತು ನಿಷೇಧಿಸಿತ್ತು. ಇದೀಗ ಎರಡು ಬಗೆಯ ಈರುಳ್ಳಿ ರಫ್ತಿಗೆ ಅನುಮತಿ ನೀಡಿದೆ.
ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಈ ಕ್ರಮವು ರೈತರನ್ನು ಸಬಲೀಕರಣಗೊಳಿಸುತ್ತದೆ ಮತ್ತು ಅವರ ಆದಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
“ರೈತರನ್ನು ಸಶಕ್ತಗೊಳಿಸುವ ಮತ್ತು ಅವರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರು ರೋಸ್ ಈರುಳ್ಳಿ ಮತ್ತು ಕೃಷ್ಣಪುರಂ ಈರುಳ್ಳಿಯನ್ನು ತಲಾ 10,000 ಮೆ.ಟನ್ ವರೆಗೆ ರಫ್ತು ಮಾಡಲು ಸರ್ಕಾರ ಅನುಮತಿ ನೀಡುತ್ತದೆ” ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.
Empowering farmers & increasing their income, Govt permits export of Bangalore Rose Onions & Krishnapuram Onions of up to 10,000 MT each 🧅
किसान सशक्तिकरण व आय में वृद्धि हेतु सरकार ने बैंगलोर Rose Onions व Krishnapuram Onions के निर्यात को 10,000 MT तक की अनुमति दी। pic.twitter.com/CNTtS6Qd0J
— Piyush Goyal (@PiyushGoyal) October 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.