ನವದೆಹಲಿ: ಗ್ರಾಮೀಣ ಭಾರತವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆಯಾದ ಸ್ವಾಮಿತ್ವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅ. 11 ರಂದು ಚಾಲನೆ ನೀಡಲಿದ್ದಾರೆ. ಆಸ್ತಿ ಒಡೆತನಕ್ಕೆ ಸಂಬಂಧಿಸಿದಂತೆ ಕಾರ್ಡ್ಗಳನ್ನು ವಿತರಿಸುವ ಮಹತ್ವದ ಯೋಜನೆ ಇದಾಗಿದೆ.
ಇದು ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದ್ದು ಗ್ರಾಮೀಣ ಭಾಗದ ಜನರಿಗೆ ಸಾಲ ಪಡೆಯಲು, ಇತರೆ ಆರ್ಥಿಕ ನೆರವುಗಳನ್ನು ಪಡೆಯುವ ನಿಟ್ಟಿನಲ್ಲಿ ಮುಖ್ಯವಾಗಲಿದೆ. ಈ ಯೋಜನೆಯ ಉದ್ಘಾಟನೆಯ ಬಳಿಕ ಗ್ರಾಮೀಣ ಜನರ ಮೊಬೈಲ್ಗೆ ಕಳುಹಿಸಲಾದ ಲಿಂಕ್ ಅನ್ನು ಬಳಸಿ ಈ ಕಾರ್ಡ್ ಅನ್ನು ಡೌನ್ಲೋಡ್ ಮಾಡಬಹುದಾಗಿದೆ. ಮುಂದಿನ ದಿನಗಳಲ್ಲಿ ಆಯಾ ರಾಜ್ಯ ಸರ್ಕಾರಗಳು ಇಂತಹ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಿವೆ.
ಈ ಯೋಜನೆಗೆ ಕರ್ನಾಟಕದ ಎರಡು ಗ್ರಾಮಗಳು ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳಿಂದ ಫಲಾನುಭವಿಗಳನ್ನು ಗುರುತಿಸಲಾಗಿದೆ. ಮಹಾರಾಷ್ಟ್ರ ಹೊರತುಪಡಿಸಿದಂತೆ ಬೇರೆ ರಾಜ್ಯಗಳಿಂದ ಗುರುತಿಸಲಾದ ಫಲಾನುಭವಿಗಳಿಗೆ ಒಂದೇ ದಿನದಲ್ಲಿ ವ್ಯಕ್ತಿಗತವಾಗಿ ಕಾರ್ಡ್ಗಳನ್ನು ವಿತರಣೆ ಮಾಡುವುದಾಗಿ ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಈ ಕಾರ್ಡ್ಗಳನ್ನು ವಿತರಣೆ ಮಾಡಲು ಸಾಂಕೇತಿಕವಾಗಿ ಶುಲ್ಕ ಪಡೆಯುವ ವ್ಯವಸ್ಥೆ ಇದ್ದು, ಅಲ್ಲಿ ಮುಂದಿನ ತಿಂಗಳು ಸ್ವಾಮಿತ್ವ ಕಾರ್ಡ್ ವಿತರಣೆ ನಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಯೋಜನೆಯನ್ನು ಪಂಚಾಯತ್ ರಾಜ್ ವ್ಯವಸ್ಥೆ ರೂಪಿಸಿದ್ದು, ರಾಷ್ಟ್ರೀಯ ಪಂಚಾಯತ್ ದಿನವಾದ ಏ. 24 ರಂದು ಘೋಷಣೆ ಮಾಡಲಾಗಿತ್ತು. ಮುಂದಿನ ವರ್ಷಗಳಲ್ಲಿ ಸಂಪೂರ್ಣ ದೇಶಕ್ಕೆ ಸಂಬಂಧಿಸಿದಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದಾಗಿಯೂ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.