ಕರೌಲಿ: ರಾಜಸ್ಥಾನದ ಗ್ರಾಮವೊಂದರಲ್ಲಿ ದೇವಸ್ಥಾನದ ಅರ್ಚಕರೊಬ್ಬರನ್ನು ಭೂಮಾಫಿಯಾದ ದುಷ್ಕರ್ಮಿಗಳು ಸಜೀವವಾಗಿ ಸುಟ್ಟು ಹಾಕಿದ ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇದೀಗ ಅರ್ಚಕರ ಕುಟುಂಬಸ್ಥರು ರಾಜಸ್ಥಾನ ಸರ್ಕಾರದ ವಿರುದ್ಧ ಸಮರ ಸಾರಿದ್ದು, ತಮ್ಮ ಬೇಡಿಕೆ ಈಡೇರುವವರೆಗೆ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧನ ಮಾಡಬೇಕು, ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅಲ್ಲದೆ 50 ಲಕ್ಷ ಪರಿಹಾರ ಮತ್ತು ಸರ್ಕಾರಿ ಉದ್ಯೋಗದ ಬೇಡಿಕೆ ಇಟ್ಟಿದ್ದಾರೆ.
ಘಟನೆ ನಡೆದ ಬಾಬುಲಾಲ್ ಗ್ರಾಮಕ್ಕೆ ಆಗಮಿಸಿದ ಮ್ಯಾಜಿಸ್ಟ್ರೇಟ್ ಓಂ ಪ್ರಕಾಶ್ ಮೀನಾ ಅವರು, ಅಂತ್ಯಸಂಸ್ಕಾರ ನಡೆಸುವಂತೆ ಕುಟುಂಬಸ್ಥರ ಮನವೊಲಿಸುತ್ತಿದ್ದಾರೆ.
ಅಲ್ಲದೆ ಅಂತಿಮ ವಿಧಿ ವಿಧಾನದಲ್ಲಿ ಪಾಲ್ಗೊಳ್ಳಲು ಗ್ರಾಮದ ಜನರು ಜಮಾಯಿಸಿದ್ದು, ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವಾಲಯದ ಭೂಮಿಯನ್ನು ಕಬಳಿಸಲು ಹೊಂಚು ಹಾಕುತ್ತಿದ್ದ ಭೂಗಳ್ಳರ ವಿರುದ್ಧ ಅರ್ಚಕರು ತಿರುಗಿ ಬಿದ್ದಿದ್ದು ಅವರ ಹತ್ಯೆಗೆ ಕಾರಣ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.