ಗುವಾಹಟಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಅಸ್ಸಾಂ ಸರ್ಕಾರ ತನ್ನ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಮದರಸಗಳನ್ನು ಬಂದ್ ಮಾಡಲು ಆದೇಶ ಹೊರಡಿಸಿದೆ. ಮದರಸ ಮಾತ್ರವಲ್ಲದೇ ಸಂಸ್ಕೃತ ಶಾಲೆಗಳನ್ನು ಕೂಡ ಅದು ಮುಚ್ಚಲಿದೆ.
ಧಾರ್ಮಿಕ ಧರ್ಮಗ್ರಂಥಗಳ ಬೋಧನೆಗಾಗಿ ಸಾರ್ವಜನಿಕ ಹಣವನ್ನು ಬಳಸುವುದು ಸಾಧ್ಯವಾಗದ ಕಾರಣ ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಮದರಸ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಅಸ್ಸಾಂ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. .
“ನಾವು ಈ ಹಿಂದೆ ರಾಜ್ಯ ವಿಧಾನಸಭೆಯಲ್ಲಿ ನಮ್ಮ ಸರ್ಕಾರದ ನೀತಿಯನ್ನು ಘೋಷಣೆ ಮಾಡಿದ್ದೇವೆ. ಸರ್ಕಾರದ ಧನಸಹಾಯದೊಂದಿಗೆ ಯಾವುದೇ ಧಾರ್ಮಿಕ ಶಿಕ್ಷಣ ಇರಬಾರದು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಖಾಸಗಿಯಾಗಿ ನಡೆಸುವ ಮದರಸಾ ಮತ್ತು ಸಂಸ್ಕೃತ ಶಾಲೆಗಳ ಬಗ್ಗೆ ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ಶರ್ಮಾ ಹೇಳಿದ್ದಾರೆ.
ಶರ್ಮಾ ಪ್ರಕಾರ, ಈ ಬಗ್ಗೆ ರಾಜ್ಯ ಸರ್ಕಾರವು ನವೆಂಬರ್ನಲ್ಲಿ ಔಪಚಾರಿಕ ಅಧಿಸೂಚನೆ ಹೊರಡಿಸಲಿದೆ.
ಮದರಸಾಗಳನ್ನು ಮುಚ್ಚಿದ ನಂತರ 48 ಗುತ್ತಿಗೆ ಶಿಕ್ಷಕರನ್ನು ಶಿಕ್ಷಣ ಇಲಾಖೆಯಡಿ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ಶರ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.