ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಸ್ವಾಮಿತ್ವ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವಲ್ಲಿ ಇದು ಮಹತ್ವದ ಕೊಡುಗೆ ನೀಡಲಿದೆ. ಮಾತ್ರವಲ್ಲದೇ, ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ. ಈ ಯೋಜನೆಯಡಿ ಗ್ರಾಮೀಣ ಜನರಿಗೆ ಆಸ್ತಿ ಕಾರ್ಡ್ ಅನ್ನು ವಿತರಣೆ ಮಾಡಲಾಗುತ್ತದೆ.
ಕರ್ನಾಟಕದ ಎರಡು ಗ್ರಾಮಗಳು ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳನ್ನು ಗಮನದಲ್ಲಿಟ್ಟುಕೊಂಡು ಇಂದು ಯೋಜನೆ ಜಾರಿಯಾಗಿದೆ.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, “ಇಂದು ಒಂದು ಲಕ್ಷ ಜನರಿಗೆ ಅವರ ಮನೆಯ ಸ್ವಾಮಿತ್ವ ಪತ್ರ ಸಿಕ್ಕಿದೆ. ಸ್ವಾಮಿತ್ವ ಕಾರ್ಡ್ ಡೌನ್ಲೋಡ್ ಮಾಡಿಕೊಂಡವರಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆತ್ಮ ನಿರ್ಭರ ಭಾರತ ಅಭಿಯಾನದಲ್ಲಿ ಇಂದು ಭಾರತ ಒಂದು ದೊಡ್ಡ ಹೆಜ್ಜೆಯನ್ನು ಮುಂದಿಟ್ಟಿದೆ. ಸ್ವಾಮಿತ್ವ ಯೋಜನೆ ಗ್ರಾಮಗಳ ಜನರಿಗೆ ಸ್ವಾವಲಂಬಿಗಳಾಗಲು ತುಂಬಾ ಸಹಾಯ ಮಾಡಲಿದೆ” ಎಂದಿದ್ದಾರೆ.
ಸ್ವಾಮಿತ್ವ ಯೋಜನೆ ಆಸ್ತಿ ಕಾರ್ಡ್ ಅಥವಾ ಪ್ರಾಪರ್ಟಿ ಕಾರ್ಡ್ಗೆ ಸಂಬಂಧಿಸಿದ್ದಾಗಿದೆ. ಈ ಯೋಜನೆಯಿಂದಾಗಿ ಸುಮಾರು ಒಂದು ಲಕ್ಷ ಆಸ್ತಿ ಮಾಲೀಕರು ತಮ್ಮ ಮೊಬೈಲ್ನ SMS ಲಿಂಕ್ ಮೂಲಕವೇ ಆಸ್ತಿ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಸಾಲ ಪಡೆಯಲು ಹಾಗೂ ಇತರೆ ಆರ್ಥಿಕ ನೆರವುಗಳನ್ನು ಪಡೆಯಲು ಗ್ರಾಮೀಣ ಜನರು ಈ ಕಾರ್ಡ್ಗಳನ್ನು ಬಳಕೆ ಮಾಡಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.