ನವದೆಹಲಿ: ವಿಜಯ ರಾಜೇ ಸಿಂಧಿಯಾ ಅವರ ಜನ್ಮದಿನದ ಗೌರವಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು 100 ರೂಪಾಯಿಗಳ ವಿಶೇಷ ಸ್ಮರಣಾರ್ಥ ನಾಣ್ಯವನ್ನು ಇಂದು ಬಿಡುಗಡೆ ಮಾಡಿದರು. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯ ರಾಜೆ ಸಿಂಧಿಯಾ ಅವರನ್ನು ಗ್ವಾಲಿಯರ್ನ ರಾಜಮಾತಾ ಎಂದೂ ಕರೆಯಲಾಗುತ್ತದೆ.
ಧೀಮಂತ ನಾಯಕಿಗೆ ಗೌರವ ಸಲ್ಲಿಸಿದ ಮೋದಿ, ರಾಜಮಾತಾ ಸಿಂಧಿಯಾ ಅವರ ಜೀವನ ಮತ್ತು ಕಾರ್ಯ ಸದಾ ಬಡವರ ಆಕಾಂಕ್ಷೆಗಳೊಂದಿಗೆ ಬೆಸೆದುಕೊಂಡಿತ್ತು ಮತ್ತು ಅವರ ಜೀವನವು ಜನಸೇವಗೆ ಮೀಸಲಾಗಿತ್ತು. ಕಳೆದ ಶತಮಾನದಲ್ಲಿ ಭಾರತಕ್ಕೆ ನಿರ್ದೇಶನ ನೀಡಿದ ಮತ್ತು ಭಾರತೀಯ ರಾಜಕಾರಣದ ಪ್ರತಿಯೊಂದು ಪ್ರಮುಖ ಹಂತಕ್ಕೂ ಸಾಕ್ಷಿಯಾದ ವ್ಯಕ್ತಿಗಳಲ್ಲಿ ಒಬ್ಬರು ಎಂದಿದ್ದಾರೆ.
“ರಾಜಮಾತಾ ಸಿಂಧಿಯಾ ಅವರು ರಾಷ್ಟ್ರದ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ದೇಶದ ಭವಿಷ್ಯದ ಪೀಳಿಗೆಗೆ ತನ್ನ ಎಲ್ಲ ಸಂತೋಷವನ್ನು ತ್ಯಜಿಸಿದರು. ಅವರ ಜೀವನವು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವದ ಮನೋಧರ್ಮವು ಜೀವನ ಇತರರಿಗೆ ಸೇವೆ ಸಲ್ಲಿಸಲು ಇರುತ್ತದೆ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಪ್ರಗತಿಪರ ಸುಧಾರಣೆಗಳು ಮತ್ತು ಬೆಳವಣಿಗೆಗನ್ನು ವಿವರಿಸಿದ ಮೋದಿ, ಇಂದು ಇರುತ್ತಿದ್ದರೆ ಈ ಸಕಾರಾತ್ಮಕ ಬದಲಾವಣೆಗಳನ್ನು ನೋಡಿ ರಾಜಮಾತಾ ಸಿಂಧಿಯಾ ಸಂತೋಷಪಡುತ್ತಿದ್ದರು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರಾಜಮಾತಾ ಸಿಂಧಿಯಾ ಅವರ ಕುಟುಂಬದ ಆಪ್ತರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.