ಬೆಂಗಳೂರು: ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಮಾಲಿನ್ಯವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ (ಇವಿ) ಬಳಕೆಗೆ ಸಬ್ಸಿಡಿ ನೀಡಲು ಮುಂದಾಗಿದೆ.
EV ಗಳ ಬಳಕೆಗೆ ಮೂಲಸೌಕರ್ಯ ನೀಡಿದ ಪ್ರಥಮ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ
ಬ್ಯಾಟರಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಒಟ್ಟಾರೆ ವೆಚ್ಚದ ಶೇಕಡಾ 25ರಷ್ಟು ಮತ್ತು ಗರಿಷ್ಠ 10 ಲಕ್ಷದವರಗೆ ಸಬ್ಸಿಡಿ ನೀಡಲಾಗುತ್ತದೆ, ಬ್ಯಾಟರಿ ಬದಲಾವಣೆ ಕೇಂದ್ರ ಸ್ಥಾಪನೆಗೆ 2.5 ಲಕ್ಷದಿಂದ ಹತ್ತು ಲಕ್ಷ ರೂಗಳ ವರೆಗೆ ಸಬ್ಸಿಡಿ ಘೋಷಣೆ ಮಾಡಲಾಗುತ್ತಿದೆ.
ಸುಲಭವಾಗಿ ಬ್ಯಾಟರಿಗಳನ್ನು ಬದಲಾಯಿಸಿಕೊಳ್ಳುವ ಮೂಲಕ ಸುಗಮ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬ್ಯಾಟರಿ ಸ್ವ್ಯಾಪಿಂಗ್ ಕೇಂದ್ರಗಳ ಸ್ಥಾಪನೆ ಉತ್ತೇಜಿಸಲು ಸಬ್ಸಿಡಿ ನೀಡುವ ಪ್ರಸ್ತಾಪವಿದೆ ಎಂದು ಮೂಲಗಳು ತಿಳಿಸಿವೆ.
.
ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ನಮ್ಮ ಸರ್ಕಾರದಿಂದ ಉತ್ತೇಜನ!
ಮಾಲಿನ್ಯವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ (ಇವಿ) ಬಳಕೆಗೆ ಸಬ್ಸಿಡಿ ನೀಡಲು ಮುಂದಾಗಿದೆ. EV ಗಳ ಬಳಕೆಗೆ ಮೂಲಸೌಕರ್ಯ ನೀಡಿದ ಪ್ರಥಮ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. pic.twitter.com/9Ij9AKSxAZ
— Dr. Ashwathnarayan C. N. (@drashwathcn) October 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.