ನವದೆಹಲಿ: ಗರೀಬ್ ಕಲ್ಯಾಣ್ ರೋಜರ್ ಅಭಿಯಾನ್ ಅಡಿಯಲ್ಲಿ ಒಟ್ಟು 32 ಕೋಟಿ ಮಾನವ ದಿನಗಳ ಉದ್ಯೋಗವನ್ನು ಒದಗಿಸಲಾಗಿದೆ ಮತ್ತು 31, 577 ಕೋಟಿ ರೂಪಾಯಿಗಳನ್ನು ಈವರೆಗೆ ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
1.32 ಸಾವಿರಕ್ಕೂ ಹೆಚ್ಚು ನೀರಿನ ಸಂರಕ್ಷಣಾ ರಚನೆಗಳು, 4.12 ಲಕ್ಷ ಗ್ರಾಮೀಣ ಮನೆಗಳು, 35 ,529 ಜಾನುವಾರು ಶೆಡ್, 25,689 ಕೃಷಿ ಕೊಳಗಳು, 16 ಸಾವಿರ ಸಮುದಾಯ ನೈರ್ಮಲ್ಯ ಸಂಕೀರ್ಣ ಮತ್ತು ಇತ್ಯಾದಿಗಳನ್ನು ಒಳಗೊಂಡಂತೆ ಹೆಚ್ಚಿನ ಸಂಖ್ಯೆಯ ಮೂಲಸೌಕರ್ಯಗಳನ್ನು ಯೋಜನೆಯಡಿ ನಿರ್ಮಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಅಭಿಯಾನದ ಭಾಗವಾಗಿ ಜಿಲ್ಲಾ ಖಜಾನೆ ನಿಧಿ ಅಡಿಯಲ್ಲಿ 7,340 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 2,123 ಗ್ರಾಮ ಪಂಚಾಯಿತಿಗಳಿಗೆ ಅಭಿಯಾನದ ಸಂದರ್ಭದಲ್ಲಿ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಅಲ್ಲದೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಒಟ್ಟು 2, 595 ಕಾರ್ಯಗಳು ಮತ್ತು 62, 824 ಜನರಿಗೆ ಅಭಿಯಾನದ ಸಮಯದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಮೂಲಕ ಕೌಶಲ್ಯ ತರಬೇತಿ ನೀಡಲಾಗಿದೆ ಎಂದಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಗ್ರಾಮಗಳಿಗೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮತ್ತು ಗ್ರಾಮೀಣ ಪ್ರದೇಶದ ಸಂಕಷ್ಟದಲ್ಲಿರುವ ನಾಗರಿಕರಿಗೆ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲು ಗರೀಬ್ ಕಲ್ಯಾಣ್ ರೋಜರ್ ಅಭಿಯಾನವನ್ನು ಪ್ರಾರಂಭಿಸಲಾಯಿತು. ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಮಿಷನ್ ಮೋಡ್ನಲ್ಲಿ ಕ್ರಮ ತೆಗೆದುಕೊಳ್ಳಲಾತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.