ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜಾರಿ ಜಿಲ್ಲೆಯಲ್ಲಿ ಸುಮಾರು 1,900 ಪಕ್ಕಾ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡಲಾಗುತ್ತದೆ.
ರಜಾರಿ ಜಿಲ್ಲೆಯ ಧರಸ್ಕರಿ ಗ್ರಾಮದಲ್ಲಿ ಈ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಗ್ರಾಮದ ಬಹುತೇಕ ಜನರು ಕಚ್ಚಾ ಮನೆಗಳಲ್ಲಿ ವಾಸವಾಗಿದ್ದಾರೆ. ಇದರಿಂದ ಮಳೆಗಾಲ ಮತ್ತು ಚಳಿಗಾಲದ ಸಂದರ್ಭದಲ್ಲಿ ಹಿಮಪಾತ ಮತ್ತು ಭಾರಿ ಮಳೆಯ ಕಾರಣದಿಂದ ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇವರನ್ನು ಈ ಸಮಸ್ಯೆಗಳಿಂದ ಮುಕ್ತಗೊಳಿಸುವ ಸಲುವಾಗಿ ಕೇಂದ್ರ ಸರಕಾರವು ಆವಾಸ್ ಯೋಜನೆ ಅಡಿಯಲ್ಲಿ ಪಕ್ಕಾ ಮನೆಗಳನ್ನು ನಿರ್ಮಾಣ ಮಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧರಸ್ಕರಿ ಸರಪಂಚ್ ಐಜಾಜ್ ಆಹ್ಮದ್ , “ಈ ಗ್ರಾಮದ ಜನರು ತೀರಾ ಬಡವರು. ಕಷ್ಟಕರವಾದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಮಳೆಗಾಲ ಮತ್ತು ಚಳಿಗಾಲದಲ್ಲಿ ಇವರ ಬದುಕು ದುಸ್ತರವಾಗುತ್ತದೆ. ಸಣ್ಣ ಗ್ರಾಮಗಳನ್ನು ಆಡಳಿತಗಳು ನಿರ್ಲಕ್ಷ್ಯ ಮಾಡುತ್ತವೆ. ಆದರೆ ಈಗ ಈ ಗ್ರಾಮಕ್ಕೆ ಹೊಸ ಯೋಜನೆಗಳು ಬರುತ್ತಿರುವುದು ಸಂತೋಷವನ್ನು ತಂದಿದೆ” ಎಂದಿದ್ದಾರೆ.
“2019 ರಿಂದ ಇದುವರೆಗೆ ನಾವು ಸಾಕಷ್ಟು ಜನರಿಗೆ ಪಿಂಚಣಿಯನ್ನು ನೀಡಿದ್ದೇವೆ ಮತ್ತು ಸರ್ಕಾರಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ. ಅದರಲ್ಲೂ ಹೊಸ ತಾಯಂದಿರಿಗೆ ಹಾಗೂ ವಯಸ್ಸಾದವರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.