ನವದೆಹಲಿ: ಡಾ.ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಆತ್ಮಚರಿತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬಿಡುಗಡೆ ಮಾಡಿದ್ದಾರೆ ಮತ್ತು ಪ್ರವರ ಗ್ರಾಮೀಣ ಶಿಕ್ಷಣ ಸಂಘಕ್ಕೆ ‘ಲೋಕನೇತ ಡಾ.ಬಾಳಾಸಾಹೇಬ್ ವಿಖೆ ಪಾಟೀಲ್ ಪ್ರವರ ಗ್ರಾಮೀಣ ಶಿಕ್ಷಣ ಸೊಸೈಟಿ’ ಎಂದು ಮರುನಾಮಕರಣ ಮಾಡಿದ್ದಾರೆ.
ಡಾ.ಬಾಳಾಸಾಹೇಬ್ ವಿಖೆ ಪಾಟೀಲ್ ಅವರು ಲೋಕಸಭೆಯ ಸದಸ್ಯರಾಗಿ ಅನೇಕ ಅವಧಿಯವರೆಗೆ ಸೇವೆ ಸಲ್ಲಿಸಿದ್ದರು. ಅವರ ಆತ್ಮಚರಿತ್ರೆಯ ಶೀರ್ಷಿಕೆ ‘ದೇಹ್ ವೆಚ್ವಾ ಕರಣಿ’ ಅಂದರೆ ‘ಒಬ್ಬರ ಜೀವನವನ್ನು ಉದಾತ್ತ ಉದ್ದೇಶಕ್ಕಾಗಿ ಅರ್ಪಿಸುವುದು’ ಎಂಬುದಾಗಿದೆ. ಕೃಷಿ ಮತ್ತು ಸಹಕಾರಿ ಸೇರಿದಂತೆ ವಿವಿಧ ಕ್ಷೇತ್ರಗಳ ಸೇವೆಯಲ್ಲಿ ತನ್ನ ಇಡೀ ಜೀವನವನ್ನು ಸಮಾಜದ ಹಿತಕ್ಕಾಗಿ ಅರ್ಪಿಸಿದ್ದರಿಂದ ಈ ಹೆಸರು ಹೆಚ್ಚು ಸೂಕ್ತವೆನಿಸಿದೆ.
ಗ್ರಾಮೀಣ ಜನತೆಗೆ ವಿಶ್ವಮಟ್ಟದ ಶಿಕ್ಷಣವನ್ನು ನೀಡುವ ಮತ್ತು ಹೆಣ್ಣು ಮಗುವಿಗೆ ಅಧಿಕಾರ ನೀಡುವ ಉದ್ದೇಶದಿಂದ 1964 ರಲ್ಲಿ ಅಹ್ಮದ್ನಗರ ಜಿಲ್ಲೆಯ ಲೋನಿ ಎಂಬಲ್ಲಿ ಪ್ರವರ ಗ್ರಾಮೀಣ ಶಿಕ್ಷಣ ಸೊಸೈಟಿಯನ್ನು ಸ್ಥಾಪಿಸಲಾಯಿತು. ಸೊಸೈಟಿ ಪ್ರಸ್ತುತ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಪ್ರಮುಖ ಉದ್ದೇಶದೊಂದಿಗೆ ಸೇವೆ ಸಲ್ಲಿಸುತ್ತಿದೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಡಾ.ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಆತ್ಮಚರಿತ್ರೆ ಇಂದು ಬಿಡುಗಡೆಯಾಗಿರಬಹುದು, ಆದರೆ ಅವರ ಜೀವನದ ಕಥೆಗಳು ಮಹಾರಾಷ್ಟ್ರದ ಪ್ರತಿಯೊಂದು ಪ್ರದೇಶದಲ್ಲಿಯೂ ಕಂಡುಬರುತ್ತವೆ. ಬಾಳಾಸಾಹೇಬ್ ವಿಖೆ ಪಾಟೀಲ್ ಅವರು ಹೇಗೆ ಇದ್ದರು ಎಂಬುದನ್ನು ನಾನು ನೋಡಿದ್ದೇನೆ ಅವರ ಜೀವನ ಮಹಾರಾಷ್ಟ್ರದ ಅಭಿವೃದ್ಧಿಗೆ ಅರ್ಪಿತವಾಗಿತ್ತು. ಈ ಶುಭ ಸಂದರ್ಭಕ್ಕೆ ಸೇರಲು ನನ್ನನ್ನು ಆಹ್ವಾನಿಸಿದ ವಿಖ್ ಪಾಟೀಲ್ ಅವರ ಕುಟುಂಬ ಮತ್ತು ಅಹ್ಮದ್ನಗರದ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.