ಕೋಲ್ಕತಾ: ಅಕ್ಟೋಬರ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಇದು ನವರಾತ್ರಿಯ ದುರ್ಗಾ ಪೂಜಾ ಉತ್ಸವದ ಆರನೇ ದಿನ ಆಗಲಿದೆ. ಅಂದರೆ ಅವರು ದುರ್ಗಾ ಶಕ್ತಿ ದಿನದಂದು ಸಮಾವೇಶ ನಡೆಸಲಿದ್ದಾರೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹಬ್ಬಿಸುತ್ತಿರುವ ಸುಳ್ಳುಗಳನ್ನು ಬಹಿರಂಗಪಡಿಸಲು ಬಂಗಾಳದ ಜನರನ್ನು ಉದ್ದೇಶಿಸಿ ಮಾತನಾಡುವಂತೆ ಪಶ್ಚಿಮಬಂಗಾಳ ರಾಜ್ಯ ಘಟಕ ಪ್ರಧಾನ ಮಂತ್ರಿಗೆ ಮನವಿ ಮಾಡಿದೆ ಎಂದು ಬಿಜೆಪಿಯ ಹಿರಿಯ ಮುಖಂಡರು ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ಸಮಾವೇಶಕ್ಕೂ ಮುಂಚಿತವಾಗಿ, ಗೃಹ ಸಚಿವ ಅಮಿತ್ ಶಾ ಅವರು ಅಕ್ಟೋಬರ್ 17 ರಂದು ಉತ್ತರ ಬಂಗಾಳದ ಸಿಲಿಗುರಿಗೆ ಭೇಟಿ ನೀಡಿ ಉತ್ತರ ಬಂಗಾಳ ವಲಯದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.
2021 ರ ವಿಧಾನಸಭಾ ಚುನಾವಣೆಯ ಪ್ರಚಾರವು ಪ್ರಧಾನಿ ಮೋದಿಯವರ ಭಾಷಣದೊಂದಿಗೆ ಪ್ರಾರಂಭವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ದುರ್ಗಾ ಪೂಜೆಯ ಬಳಿಕ ಅವರು ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ.
ಪಶ್ಚಿಮಬಂಗಾದಲ್ಲಿಬಿಜೆಪಿಯ ಚುನಾವಣಾ ಉಸ್ತುವಾರಿಯನ್ನು ಅಮಿತ್ ಶಾ ಮುನ್ನಡೆಸಲಿದ್ದಾರೆ. ಶೀಘ್ರದಲ್ಲೇ ಅವರು ರಾಜ್ಯ ಘಟಕಗಳೊಂದಿಗೆ ಸರಣಿ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಘೋಷ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.