ಕಠ್ಮಂಡು: ಭಾರತೀಯ ಭೂಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ನವೆಂಬರ್ ತಿಂಗಳಲ್ಲಿ ನೇಪಾಳಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ನೇಪಾಳ ಸೇನೆಯ ಗೌರವ ಜನರಲ್ ರ್ಯಾಂಕ್ ಅನ್ನು ಪ್ರದಾನಿಸಲಾಗುತ್ತದೆ.
ಕಠ್ಮಂಡುವಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೇಪಾಳ ಸೇನೆಯ ಈ ಗೌರವವನ್ನು ಅವರಿಗೆ ಪ್ರದಾನಿಸಲಾಗುತ್ತದೆ.
ಕಳೆದ ಫೆಬ್ರವರಿ ತಿಂಗಳಲ್ಲಿ ನೇಪಾಳಕ್ಕೆ ನರವಾಣೆ ಭೇಟಿ ನಿಗದಿಯಾಗಿತ್ತು, ಆದರೆ ಕೋವಿಡ್ ಕಾರಣದಿಂದಾಗಿ ಭೇಟಿ ಮುಂದೂಡಲ್ಪಟ್ಟಿತ್ತು. ಇದೀಗ ನವೆಂಬರ್ನಲ್ಲಿ ಅವರ ಭೇಟಿ ನಿಗದಿಯಾಗಿದೆ.
ಭಾರತದ ಭೂಭಾಗಗಳನ್ನು ಒಳಗೊಂಡ ಹೊಸ ಭೂಪಟವನ್ನು ನೇಪಾಳ ಬಿಡುಗಡೆ ಮಾಡಿದ ಬಳಿಕ ಉಭಯ ದೇಶಗಳ ನಡುವೆ ಮೊದಲ ಉನ್ನತ ಮಟ್ಟದ ಭೇಟಿ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.