ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2023-24ರ ಹಣಕಾಸು ವರ್ಷದವರೆಗೆ ಐದು ವರ್ಷಗಳ ಅವಧಿಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಿಗೆ 520 ಕೋಟಿ ರೂಪಾಯಿ ಪ್ಯಾಕೇಜ್ ಅನುಮೋದಿಸಿದೆ. ಈ ಪ್ಯಾಕೇಜ್ ಅನ್ನು ದೀನದಯಾಳ್ ಅಂತ್ಯೋದಯ ಯೋಜನೆಗೆ ಬಳಕೆ ಮಾಡಲಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಅಂತ್ಯೋದಯ ಯೋಜನೆಗೆ ಸಾಕಷ್ಟು ಹಣವನ್ನು ಖಚಿತಪಡಿಸುವ ಉದ್ದೇಶವನ್ನು ಈ ಪ್ಯಾಕೇಜ್ ಹೊಂದಿದೆ. ಅಲ್ಲದೇ ಕೇಂದ್ರ ಪ್ರಾಯೋಜಿತ ಫಲಾನುಭವಿ-ಆಧಾರಿತ ಯೋಜನೆಗಳನ್ನು ಸಮಯೋಚಿತ ರೀತಿಯಲ್ಲಿ ಸಾರ್ವತ್ರಿಕಗೊಳಿಸುವ ಭಾರತ ಸರ್ಕಾರದ ಉದ್ದೇಶಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ.
ಇದು ಗ್ರಾಮೀಣ ಕುಟುಂಬಗಳ ಜೀವನಮಟ್ಟ ಮತ್ತು ಮಹಿಳಾ ಸಬಲೀಕರಣವನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರವಹಿಸುವ ಅಂತ್ಯೋದಯ ಯೋಜನೆಗೆ ಹೆಚ್ಚಿನ ಬಲವನ್ನು ಈ ಪ್ಯಾಕೇಜ್ ನೀಡಲಿದೆ.
ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY-NRLM) ಕೇಂದ್ರೀಯ ಪ್ರಾಯೋಜಿತ ಕಾರ್ಯಕ್ರಮವಾಗಿದ್ದು, ದೇಶಾದ್ಯಂತದ ಗ್ರಾಮೀಣ ಬಡ ಕುಟುಂಬಗಳಿಗೆ ಬಹು ಜೀವನೋಪಾಯವನ್ನು ಉತ್ತೇಜಿಸುವ ಮೂಲಕ ಗ್ರಾಮೀಣ ಬಡತನವನ್ನು ಹೋಗಲಾಡಿಸುವ ಗುರಿಯನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.