ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ದೊರೆತಿದೆ. ಈ ಪ್ರಕರಣಕ್ಕೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಪರ್ಕವಿದೆ ಎಂಬುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಹೇಳಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರಮೀಸ್ ಸಲ್ಲಿಸಿರುವ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ಪ್ರಕರಣದಲ್ಲಿ ದಾವೂದ್ ಇಬ್ರಾಹಿಂ ಕೈವಾಡದ ಬಗ್ಗೆ ಪ್ರಸ್ತಾಪ ಮಾಡಿದೆ. ಎನ್ಐಎ ಪ್ರಕಾರ, ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯರು ರಮೀಸ್ ಅನ್ನು ಆಫ್ರಿಕಾದಲ್ಲಿ ಭೇಟಿ ಮಾಡಿರುವ ಅನುಮಾನವಿದೆ ಎಂದಿದೆ.
ವಿಚಾರಣೆಯ ಸಂದರ್ಭದಲ್ಲಿ ರಮೀಸ್ ತಾಂಜೇನಿಯಾದಲ್ಲಿ ಡೈಮಂಡ್ ಬಿಸಿನೆಸ್ ಆರಂಭಿಸುವ ಪ್ರಯತ್ನವನ್ನು ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಮಾತ್ರವಲ್ಲದೇ, ತಾಂಜೇನಿಯದಲ್ಲಿ ಚಿನ್ನ ಗಣಿಗಾರಿಕೆ ಮಾಡಲು ಪರವಾನಗಿ ಪಡೆಯುವ ಪ್ರಯತ್ನವನ್ನು ಕೂಡ ನಡೆಸಿದ್ದಾನೆ. ತಾಂಜೇನಿಯಾದಿಂದ ತಂದ ಬಂಗಾರವನ್ನು ಈತ ಮಾರಾಟ ಮಾಡಿದ್ದಾನೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಹೇಳಿದೆ.
“ತಾಂಜಾನಿಯಾದಲ್ಲಿ ದಾವೂದ್ ಇಬ್ರಾಹಿಂ ಡೈಮಂಡ್ ಬಿಸಿನೆಸ್ ಹೊಂದಿದ್ದು, ಅದನ್ನು ಫಿರೋಜ್ ಎಂಬಾತ ನೋಡಿಕೊಳ್ಳುತ್ತಿದ್ದಾನೆ. ಈತ ದಕ್ಷಿಣ ಭಾರತದವನು ಎಂಬ ಬಗ್ಗೆ ಮಾಹಿತಿ ಇದೆ” ಎಂದು ಎನ್ಐಎ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.