ಬೆಂಗಳೂರು: ಕರ್ನಾಟಕ ಮುನ್ಸಿಪಲ್ ಕಾಯ್ದೆ 1976 ರ ಅಡಿಯಲ್ಲಿ 243 ವಾರ್ಡ್ಗಳ ರಚನೆಗಾಗಿ ಬಿಬಿಎಂಪಿ ಪುನರ್ ರಚನಾ ಸಮಿತಿಯ ಜಂಟಿ ಶಾಸಕಾಂಗದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಅರ್ಬನ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಡೆಪ್ಯುಟಿ ಸೆಕ್ರೆಟರಿ ಕೆ ಎ ಹಿದಾಯತುಲ್ಲಾ ಅವರು ಸಹಿ ಮಾಡಿರುವ ಸರ್ಕಾರದ ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಇದರಲ್ಲಿ ವಾರ್ಡ್ಗಳ ಡಿಲಿಮಿಟೇಶನ್ ಆದೇಶಗಳನ್ನು ಕಾರ್ಯಗತಗೊಳಿಸುವ ಸಮಿತಿಯ ರಚನೆಗೂ ಸರ್ಕಾರ ಅನುಮೋದನೆ ನೀಡಿದೆ.
ಈ ಸಮಿತಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಡೆಪ್ಯುಟಿ ಕಮಿಷನರ್ ಸೇರಿದಂತೆ ನಾಲ್ಕು ಜನ ಸದಸ್ಯರಿದ್ದು, ಬಿಬಿಎಂಪಿ ಆಯುಕ್ತರು ಈ ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಕಂದಾಯ ವಿಭಾಗದ ಸ್ಪೆಷಲ್ ಕಮಿಷನರ್ ಅವರು ಈ ಸಮಿತಿಯ ಸದಸ್ಯರು ಮತ್ತು ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಲಿರುವುದಾಗಿಯೂ ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆದೇಶ ಹೊರಡಿಸಲಾದ ದಿನದಿಂದ ತೊಡಗಿದಂತೆ ಆರು ತಿಂಗಳುಗಳ ಒಳಗಾಗಿ ಈ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವಂತೆಯೂ ಬಿಬಿಎಂಪಿ ಮತ್ತು ಸಮಿತಿಯ ಸದಸ್ಯರಿಗೆ ಸರ್ಕಾರ ಸೂಚನೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.