ನವದೆಹಲಿ: ಇಂದಿನಿಂದ ತೊಡಗಿದಂತೆ ದೇಶದಾದ್ಯಂತ ಅನ್ಲಾಕ್ 5.O ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಇಂದಿನಿಂದಲೇ ಜಾರಿಯಲ್ಲಿರಲಿವೆ.
ಮನೊರಂಜನಾ ಪಾರ್ಕ್, ಈಜುಕೊಳ, ಚಿತ್ರ ಮಂದಿರ, ಶಿಕ್ಷಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರ ಭಾಗವಹಿಸುವಿಕೆಗೆ ಮಿತಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ಪೂರಕವಾಗುವಂತೆ ಅನೇಕ ನೀತಿ ನಿಯಮಗಳನ್ನು ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಕಾರಣಕ್ಕೂ ಶಾಲೆಗಳನ್ನು ಆರಂಭ ಮಾಡುವುದಿಲ್ಲ ಎಂದು ಕೆಲವು ರಾಜ್ಯಗಳು ಈಗಾಗಲೇ ತಿಳಿಸಿವೆ. ಅದರಂತೆ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸಿಕೊಂಡು ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳನ್ನು ತೆರೆಯಲು ಕೆಲವು ರಾಜ್ಯಗಳು ನಿರ್ಧರಿಸಿವೆ.
ಇನ್ನು ಕರ್ನಾಟಕಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಸದ್ಯದ ಮಟ್ಟಿಗೆ ಶಾಲಾರಂಭಕ್ಕೆ ಕುರಿತಂತೆ ಯಾವುದೇ ರೀತಿಯ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಂಡಿಲ್ಲ. ವಿವಾಹ, ಮತ್ತಿತರ ಕಾರ್ಯಕ್ರಮಗಳಲ್ಲಿ ಎಲ್ಲಾ ರೀತಿಯ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸುವ ಮೂಲಕ 100 ಕ್ಕಿಂತ ಹೆಚ್ಚು ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿದಂತೆ ಈ ನಿಯಮ ಅನ್ವಯವಾಗಲಿದೆ.
ಕೊರೋನಾ ಸಂಕಷ್ಟದ ನಡುವೆಯೇ ನಾಡ ಹಬ್ಬ ದಸರಾ ಸಹ ಬಂದಿದ್ದು ಮೈಸೂರು ಹೊರತುಪಡಿಸಿ ರಾಜ್ಯದ ಉಳಿದ ಯಾವುದೇ ಪ್ರದೇಶದಲ್ಲಿ 100 ಕ್ಕಿಂತ ಅಧಿಕ ಜನರು ಸೇರದಂತೆಯೂ ಸೂಚನೆ ನೀಡಲಾಗಿದೆ. ಜೊತೆಗೆ ಅಕ್ಟೋಬರ್ 17 ರಿಂದ ತೊಡಗಿ ನವೆಂಬರ್ 1 ರ ವರೆಗೆ 14 ದಿನಗಳ ವರೆಗೆ ಮೈಸೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳುವುದಕ್ಕೂ ನಿಷೇಧ ಹೇರಲಾಗಿದೆ ಎಂದು ಮೈಸೂರು ಡಿ ಸಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.