ಬೆಂಗಳೂರು: ಭಾರತ ಕಂಡ ಅದ್ಬುತ ವ್ಯಕ್ತಿ, ಭಾರತ ರತ್ನ ಮಾಜಿ ಪ್ರಧಾನಿ, ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಚಾಮರಾಜನಗರದ ದೀನಬಂಧು ಟ್ರಸ್ಟ್ ಸಹಯೋಗದಲ್ಲಿ ಆರಂಭಿಸಿದ ಸಂಚಾರಿ ಸ್ಪಾರ್ಕ್ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಮಕ್ಕಳಲ್ಲಿ ವೈಜ್ಞಾನಿಕ ತಿಳುವಳಿ ಅತಿ ಮುಖ್ಯ. ಇಂತಹ ವಿಜ್ಞಾನ ಸಂಬಂಧಿತ ದೃಷ್ಟಿಕೋನದ ಬೆಳವಣಿಗೆಗೆ ಪೂರಕವಾಗುವಂತೆ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಕಲಾಂ ಅವರ ಜನ್ಮದಿನದಂದೇ ಈ ಯೋಜನೆಯನ್ನು ಆರಂಭ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗಿದೆ.
ಈ ಯೋಜನೆಯ ಮೂಲಕ ವಿಜ್ಞಾನದ ಉಪಕರಣಗಳೊಂದಿಗೆ ಸ್ಥಳದಲ್ಲೇ ಪ್ರಯೋಗಗಳನ್ನು ಮಾಡಿ, ಅವರಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಯುವಂತೆ ಮಾಡಲು ಯುವ ಬ್ರಿಗೇಡ್ ಸ್ಪಾರ್ಕ್ ಯೋಜನೆ ಆರಂಭಿಸಿದೆ. ಕೊರೋನಾ ಸಂಕಷ್ಟದ ಅವಧಿಯಲ್ಲಿ ಮಕ್ಕಳು ಶಿಕ್ಷಣ ಪಡೆಯಲು ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಮಕ್ಕಳಲ್ಲಿ ವೈಜ್ಞಾನಿಕ ಆಸಕ್ತಿ ಹೆಚ್ಚಾಗುವಂತೆ ಮಾಡಲು ಸ್ಪಾರ್ಕ್ ಆರಂಭ ಮಾಡಲಾಗಿದೆ.
ಈ ಯೋಜನೆಯಂತೆ ದ್ವಿಚಕ್ರ ಸವಾರನೊಬ್ಬ ತನ್ನೊಂದಿಗೆ 40 ಕ್ಕೂ ಅಧಿಕ ವಿಜ್ಞಾನ ಪ್ರಯೋಗಗಳನ್ನು ನಡೆಸಲು ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಂಡು ಹಳ್ಳಿ ಹಳ್ಳಿಗೆ ತೆರಳಿ ಅಲ್ಲಿ ನಾಲ್ಕಾರು ಮಕ್ಕಳನ್ನು ಒಗ್ಗೂಡಿಸಿ ಅವರಿಗೆ ಈ ಪ್ರಯೋಗಗಳನ್ನು ಮಾಡಿ ತೋರಿಸಲು ಅನುಕೂಲವಾಗುವಂತೆ ಈ ಯೋಜನೆ ಇದೆ. ಮಕ್ಕಳಲ್ಲಿ ಗಣಿತ ಮತ್ತು ವಿಜ್ಞಾನ ಸಾಧನೆಗಳ ಪರಿಚಯವನ್ನು ಮಾಡುವ ಪುಟ್ಟ ಪ್ರದರ್ಶನ ಸಹ ಸಂಚಾರಿ ಸ್ಪಾರ್ಕ್ನ ಅಂಗವಾಗಿದೆ.
ಮಕ್ಕಳಲ್ಲಿ ವೈಜ್ಞಾನಿಕ ದೃಷ್ಟಿಕೋಣ ಇರಬೇಕು. ಈ ನಿಟ್ಟಿನಲ್ಲಿ ಇಂದು, ಭಾರತರತ್ನ ಡಾ.ಅಬ್ದುಲ್ ಕಲಾಂ ಜನ್ಮದಿನದಂದೇ, ವಿಜ್ಞಾನದ ಉಪಕರಣಗಳೊಂದಿಗೆ ಸ್ಥಳದಲ್ಲಿಯೇ ಪ್ರಯೋಗಗಳನ್ನು ಮಾಡಿ, ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವ ಯುವ ಬ್ರಿಗೇಡ್ ನ ಸಂಚಾರಿ ‘ಸ್ಪಾರ್ಕ್’ ಯೋಜನೆಗೆ ಚಾಲನೆ ನೀಡಲಾಯಿತು. ಸಂಸ್ಥೆಯ @astitvam ಉಪಸ್ಥಿತರಿದ್ದರು. pic.twitter.com/tioTNYv8Gs
— B.S. Yediyurappa (@BSYBJP) October 15, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.