ಚಂಡೀಗಢ: ಹರಿಯಾಣ ರಾಜ್ಯದ ಬರೋಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಒಲಿಂಪಿಕ್ ಪದಕ ವಿಜೇತ ಕ್ರೀಡಾಪಟು ಯೋಗೇಶ್ವರ್ ದತ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಬಗ್ಗೆ ಬಿಜೆಪಿ ಗುರುವಾರ ಘೋಷಣೆ ಮಾಡಿದೆ.
ಪಕ್ಷದ ಹೇಳಿಕೆಯ ಪ್ರಕಾರ, ಕುಸ್ತಿಪಟು ನವೆಂಬರ್ 3 ರ ಉಪಚುನಾವಣೆಯಲ್ಲಿ ಸೋನಿಪತ್ನ ಬರೋಡಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನಾಂಕ.
ಏಪ್ರಿಲ್ನಲ್ಲಿ ಕಾಂಗ್ರೆಸ್ ಶಾಸಕ ಕಿಶನ್ ಹೂಡ ಅವರ ನಿಧನದ ಕಾರಣ ಉಪಚುನಾವಣೆ ನಡೆಯುತ್ತಿದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ದತ್ ಅವರು ಈ ಕ್ಷೇತ್ರದಿಂದ ಹೂಡಾ ವಿರುದ್ಧ ಸೋತಿದ್ದರು.
ಸೋನಿಪತ್ ಜಿಲ್ಲೆಯ ಭೈನ್ಸ್ವಾಲ್ ಕಲಾನ್ ಗ್ರಾಮದವರಾದ ದತ್ 2019ರಲ್ಲಿ ಹರಿಯಾಣ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರಿದ್ದರು.
2012 ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ದತ್, 2014 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದರು. 2013 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಅವರು ಸ್ವೀಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.