ನವದೆಹಲಿ: ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ಎಒ)ನ 75 ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ.ಗಳ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಇತ್ತೀಚೆಗೆ ಅಭಿವೃದ್ಧಿಪಡಿಸಿದ 8 ಬೆಳೆಗಳ 17 ಜೈವಿಕ ತಳಿ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.
ವಿಶ್ವ ಆಹಾರ ದಿನವಾದ ಇಂದು ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ಎಒ) ತನ್ನ 75 ನೇ ವಾರ್ಷಿಕೋತ್ಸವವನ್ನು ಅಚರಿಸುತ್ತಿದೆ.
ಕೃಷಿ ಮತ್ತು ಪೋಷಣೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡಿದ್ದು, ಹಸಿವು, ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ತೊಡೆದುಹಾಕುವ ಸಂಕಲ್ಪಕ್ಕೆ ಸಾಕ್ಷಿಯಾಗಿ 8 ಬೆಳೆಗಳ 17 ಜೈವಿಕ ತಳಿ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, “ಗೋಧಿ ಮತ್ತು ಅಕ್ಕಿ ಸಂಗ್ರಹದಲ್ಲಿ ಸರ್ಕಾರ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದಿದೆ. ದೇಶದಲ್ಲಿನ ಅಪೌಷ್ಟಿಕತೆ ಸಮಸ್ಯೆಯನ್ನು ಪರಿಹರಿಸಲು ನಮ್ಮ ಸರ್ಕಾರವು ರಾಗಿ ಮತ್ತು ಹೆಚ್ಚಿನ ಪೌಷ್ಠಿಕಾಂಶದ ಬೆಳೆಗಳನ್ನು ಉತ್ತೇಜಿಸುತ್ತಿದೆ. ಇಂದು ಬಿಡುಗಡೆಯಾದ 17 ಹೊಸ ಜೈವಿಕ ಬಲವರ್ಧಿತ ಬೆಳೆ ಪ್ರಭೇದಗಳು ರೈತರಿಗೆ ಪ್ರಯೋಜನವನ್ನು ನೀಡುತ್ತವೆ” ಎಂದಿದ್ದಾರೆ.
“ದುರ್ಬಲ ವರ್ಗಗಳು ಮತ್ತು ಜನಸಾಮಾನ್ಯರನ್ನು ಆರ್ಥಿಕವಾಗಿ ಮತ್ತು ಪೌಷ್ಠಿಕಾಂಶಯುಕ್ತರನ್ನಾಗಿ ಮಾಡುವಲ್ಲಿ ಎಫ್ಎಒನ ಪ್ರಯತ್ನವು ಸರಿಸಾಟಿಯಿಲ್ಲದ್ದು. ಭಾರತವು ಎಫ್ಎಒ ಜೊತೆ ಐತಿಹಾಸಿಕ ಒಡನಾಟವನ್ನು ಹೊಂದಿದೆ. ಭಾರತೀಯ ನಾಗರಿಕ ಸೇವಾ ಅಧಿಕಾರಿ ಡಾ.ಬಿನಯ್ ರಂಜನ್ ಸೇನ್ ಅವರು 1956-1967ರ ಅವಧಿಯಲ್ಲಿ ಎಫ್ಎಒ ಮಹಾನಿರ್ದೇಶಕರಾಗಿದ್ದರು. ನೊಬೆಲ್ ಶಾಂತಿ ಪ್ರಶಸ್ತಿ 2020 ಗೆದ್ದ ವಿಶ್ವ ಆಹಾರ ಕಾರ್ಯಕ್ರಮವನ್ನು ಅವರ ಕಾಲದಲ್ಲಿ ಸ್ಥಾಪಿಸಲಾಯಿತು. 2016 ರಲ್ಲಿ ಅಂತರರಾಷ್ಟ್ರೀಯ ದ್ವಿದಳ ಧಾನ್ಯಗಳ ಭಾರತದ ಪ್ರಸ್ತಾಪಗಳನ್ನು ಮತ್ತು ಇಂಟರ್ನ್ಯಾಷನಲ್ ಇಯರ್ ಆಫ್ ಮಿಲ್ಲೆಟ್ಸ್ 2023 ಅನ್ನು ಎಫ್ಎಒ ಅನುಮೋದಿಸಿದೆ ” ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.