ನವದೆಹಲಿ: ಕಳೆದ ಕೆಲವು ಸಮಯದಿಂದ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಕೇರಳ, ಕರ್ನಾಟಕ, ಛತ್ತೀಸ್ಘಡ, ರಾಜಸ್ಥಾನ, ಪ.ಬಂಗಾಳ ರಾಜ್ಯಗಳಿಗೆ ಸಂಬಂಧಿಸಿದಂತೆ ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಉನ್ನತ ಮಟ್ಟದ ತಜ್ಞರ ತಂಡಗಳನ್ನು ರಚಿಸಿದೆ.
ಈ ತಂಡದಲ್ಲಿ ಜಂಟಿ ಕಾರ್ಯದರ್ಶಿ (ಆಯಾ ರಾಜ್ಯದ ನೊಡಲ್ ಅಧಿಕಾರಿ), ಸಾರ್ವಜನಿಕ ಆರೋಗ್ಯ ವಿಚಾರಗಳ ಕಾಳಜಿ ವಹಿಸಲು ಸಾರ್ವಜನಿಕ ಆರೋಗ್ಯ ತಜ್ಞರು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲು ಓರ್ವ ವೈದ್ಯನನ್ನು ಒಳಗೊಂಡಿರಲಿದೆ. ಜೊತೆಗೆ ಪ್ರತಿ ರಾಜ್ಯ ಅನುಭವಿಸುತ್ತಿರುವ ಕ್ಲಿನಿಕಲ್ ಮ್ಯಾನೇಜ್ಮೆಂಟ್ ಪ್ರೊಟೋಕಾಲ್ ಅನ್ನು ಒಳಗೊಂಡಿರಲಿದೆ ಎಂದೂ ಕೇಂದ್ರ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದೆ.
ಸೋಂಕು ನಿಯಂತ್ರಣ, ಪರೀಕ್ಷೆ, ಸೋಂಕು ತಡೆಗಟ್ಟುವಿಕೆ, ಕಣ್ಗಾವಲು, ನಿಯಂತ್ರಣ ಕ್ರಮಗಳನ್ನು ಸೂಕ್ತ ರೀತಿಯಲ್ಲಿ ಹತೋಟಿಗೆ ತರುವಲ್ಲಿ ಆಯಾ ತಂಡಗಳು ತಮಗೆ ನಿರ್ದೇಶಿಸಲಾದ ರಾಜ್ಯಗಳಿಗೆ ಸೂಕ್ತ ಬೆಂಬಲ ನೀಡಲಿವೆ. ಸಮಯೋಚಿತವಾಗಿ ರೋಗ ನಿರ್ಣಯ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು, ಅದರ ಪರಿಣಾಮಕಾರಿ ನಿರ್ವಹಣೆಗೆ ಸಂಬಂಧಿಸಿದಂತೆ ಈ ತಂಡಗಳು ರಾಜ್ಯಗಳಿಗೆ ಮಾರ್ಗದರ್ಶನ ನೀಡಲಿದೆ ಎಂದೂ ಸಚಿವಾಲಯವು ಹೇಳಿದೆ.
ಕರ್ನಾಟಕ, ಕೇರಳ, ಛತ್ತೀಸ್ಘಡ, ರಾಜಸ್ಥಾನ ಮತ್ತು ಪ. ಬಂಗಾಳ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ 1,13,557 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 94,609, ಪ.ಬಂಗಾಳ ಮತ್ತು ಚತ್ತೀಸ್ಘಡ ಗಳಲ್ಲಿ ತಲಾ 31,984, ರಾಜಸ್ಥಾನದಲ್ಲಿ 21,587 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಈ ಪ್ರಮಾಣವನ್ನು ಹತೋಟಿಗೆ ತರಲು, ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ತಜ್ಞರ ತಂಡವನ್ನು ನೇಮಿಸಿದೆ.
ದೇಶದ ಪ್ರತಿಯೊಂದು ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಕೊರೋನ ನಿಯಂತ್ರಣ ವ್ಯವಸ್ಥೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಆ ಮೂಲಕ ಆಯಾ ರಾಜ್ಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು, ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಅವುಗಳಿಗೆ ಪೂರಕ ಮಾರ್ಗದರ್ಶನ ನೀಡುವ ಹಿನ್ನೆಲೆಯಲ್ಲಿ ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.