ನವದೆಹಲಿ: ಕರ್ನಾಟಕ ರಾಜ್ಯ ಭಾರೀ ಮಳೆಯಿಂದ ತತ್ತರಿಸಿದೆ. ನೆರೆ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ಕರ್ನಾಟಕದ ಜೊತೆಗೆ ನಾವಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಮಾಹಿತಿ ಪಡೆಯಲಾಗಿದೆ. ಕರ್ನಾಟಕದ ಜನತೆಯ ಜೊತೆಗೆ ನಾವಿದ್ದೇವೆ. ಕರ್ನಾಟಕದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಮೋದಿ ತಿಳಿಸಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಜಿ ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾಹದಿಂದ ಬಾಧಿತರಾದ ಕರ್ನಾಟಕದ ಸಹೋದರ-ಸಹೋದರಿಯರ ಜೊತೆಯಾಗಿ ನಾವು ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದ ಎಲ್ಲಾ ಅಗತ್ಯ ನೆರವಿನ ಬೆಂಬಲದ ಭರವಸೆ ನೀಡಲಾಗಿದೆ ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ @BSYBJP Ji ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾಹದಿಂದ ಬಾಧಿತರಾದ ಕರ್ನಾಟಕದ ಸಹೋದರಿ ಮತ್ತು ಸಹೋದರರೊಂದಿಗೆ ನಾವು ಜೊತೆಯಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದ ಎಲ್ಲ ಅಗತ್ಯ ನೆರವಿನ ಬೆಂಬಲದ ಭರವಸೆ ನೀಡಲಾಗಿದೆ.
— Narendra Modi (@narendramodi) October 16, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.