ಮಡಿಕೇರಿ: ಕಾವೇರಿ ನದೀಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮುಂಜಾನೆ ಸುಮಾರು 7.05 ರ ವೇಳೆಗೆ ಪವಿತ್ರ ತೀರ್ಥೋದ್ಭವ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿಯೂ ಜೀವನದಿ ಕಾವೇರಿ ತಾಯಿ ತೀರ್ಥ ಸ್ವರೂಪಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಕನ್ಯಾ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮ ಕುಂಡಿಕೆಯಿಂದ ತೀರ್ಥೋದ್ಭವವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದ್ದು, ಕಡಿಮೆ ಜನರಿಗೆ ಈ ಸಂದರ್ಭದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಜೊತೆಗೆ ತೀರ್ಥೋದ್ಭವದಲ್ಲಿ ಭಾಗವಹಿಸುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯವಾಗಿದ್ದು, ಕೊರೋನಾ ನೆಗೆಟಿವ್ ರಿಪೋರ್ಟ್ ಹೊಂದಿದವರಿಗಷ್ಟೇ ಈ ಬಾರಿ ತಲಕಾವೇರಿಗೆ ಪ್ರವೇಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಕೊಳದಲ್ಲಿ ಸ್ನಾನಕ್ಕೆ ಅವಕಾಶ ನೀಡಲಾಗಿಲ್ಲ. ತ್ರಿವೇಣಿ ಸಂಗಮಕ್ಕೆ ಜನರು ಇಳಿಯದಂತೆಯೂ ದೇಗುಲದ ಆಡಳಿತ ಮಂಡಳಿ ಮನವಿ ಮಾಡಿದೆ.
ಇನ್ನು ತಲಾ ಸಂಕ್ರಮಣದ ವಿಶೇಷ ಪೂಜಾ ಕಾರ್ಯಕ್ರಮ ಇಂದಿನಿಂದ ತೊಡಗಿದಂತೆ ನವೆಂಬರ್ 17 ರ ವರೆಗೂ ನಡೆಯಲಿದೆ ಎಂದು ಆಡಳಿತ ವರ್ಗ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.