ನವದೆಹಲಿ: ಭಾರತದಲ್ಲಿ ಕೊರೋನವೈರಸ್ ಮಹಾಮಾರಿ ಕಾಣಿಸಿಕೊಂಡ ಬಳಿಕ ಆಡಳಿತದ ಬಹುತೇಕ ಕೆಲಸ ಕಾರ್ಯಗಳು ಡಿಜಿಟಲ್ ರೂಪದಲ್ಲಿ ನಡೆಯುತ್ತಿವೆ. ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸಗಳನ್ನೂ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಲಾಗುತ್ತಿದೆ. ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಡಿಜಿಟಲೀಕರಣ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ಭಾರತದ ನ್ಯಾಯಾಲಯಗಳು ಕೂಡ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ವರ್ಚುವಲ್ ರೂಪದಲ್ಲಿ ವಿಚಾರಣೆಗಳನ್ನು ನಡೆಸುತ್ತಿವೆ.
ಸಾಂಕ್ರಾಮಿಕ ರೋಗದ ಬಳಿಕ ದೇಶದಾದ್ಯಂತದ ನ್ಯಾಯಾಲಯಗಳು 25 ಲಕ್ಷ ಪ್ರಕರಣಗಳನ್ನು ವರ್ಚುವಲ್ ರೂಪದಲ್ಲಿದೆ ನಡೆಸಿವೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಇತ್ತೀಚಿಗೆ ಮಾಹಿತಿಯನ್ನು ನೀಡಿದ್ದಾರೆ.
25 ಲಕ್ಷ ಪ್ರಕರಣಗಳಲ್ಲಿ 9000 ಪ್ರಕರಣಗಳನ್ನು ಸುಪ್ರೀಂಕೋರ್ಟ್ ಒಂದೇ ವರ್ಚುವಲ್ ರೂಪದಲ್ಲಿ ಆಲಿಸಿದೆ ಎಂದು ಸಚಿವರು ಮಾಹಿತಿಯನ್ನು ನೀಡಿದ್ದಾರೆ.
ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾದ ಈ ಸಂದರ್ಭದಲ್ಲಿ ಡಿಜಿಟಲೀಕರಣ ನ್ಯಾಯಾಲಯಕ್ಕೆ ಹೆಚ್ಚಿನ ಪ್ರಯೋಜನವನ್ನು ತಂದುಕೊಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.