ನವದೆಹಲಿ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಇಂದು ಆಯುಷ್ಮಾನ್ ಸಹಕಾರ್ ಯೋಜನೆಯನ್ನು ಪ್ರಾರಂಭಿಸಿದರು. ದೇಶದಲ್ಲಿ ಆರೋಗ್ಯ ಮೂಲಸೌಕರ್ಯಗಳ ರಚನೆಯಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಲು ಸಹಾಯ ಮಾಡುವ ಒಂದು ಅನನ್ಯ ಉಪಕ್ರಮ ಇದಾಗಿದೆ. ಆಯುಷ್ಮಾನ್ ಸಹಕಾರ್ ಯೋಜನೆಯನ್ನು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ಸಿಡಿಸಿ) ರೂಪಿಸಿದೆ.
ಮುಂಬರುವ ವರ್ಷಗಳಲ್ಲಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ನಿರೀಕ್ಷಿತ ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲವನ್ನು 10 ಸಾವಿರ ಕೋಟಿ ರೂ.ಗಳಿಗೆ ವಿಸ್ತರಿಸಲಿದೆ ಎಂದು ತೋಮರ್ ಈ ವೇಳೆ ಘೋಷಿಸಿದ್ದಾರೆ. ಪ್ರಸ್ತುತ ಕಾಣಿಸಿಕೊಂಡಿರುವ ಸಾಂಕ್ರಾಮಿಕ ರೋಗವು ಹೆಚ್ಚಿನ ಸೌಲಭ್ಯಗಳನ್ನು ಸೃಷ್ಟಿಸುವ ಅಗತ್ಯವನ್ನು ಗಮನಕ್ಕೆ ತಂದಿದೆ ಎಂದು ಅವರು ಹೇಳಿದರು.
ಎನ್ಸಿಡಿಸಿಯ ಯೋಜನೆ ಕೇಂದ್ರ ಸರ್ಕಾರದ ರೈತ ಕಲ್ಯಾಣ ಚಟುವಟಿಕೆಗಳನ್ನು ಬಲಪಡಿಸುವ ಹೆಜ್ಜೆಯಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಎನ್ಸಿಡಿಸಿ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ನಾಯಕ್, ಎನ್ಸಿಡಿಸಿ ನಿಧಿಯು ದೇಶದ ಸಹಕಾರಿ ಸಂಸ್ಥೆಗಳು ನಿರ್ವಹಿಸುವ ಆರೋಗ್ಯ ಸೇವೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಹೇಳಿದರು. ಎನ್ಸಿಡಿಸಿಯ ಆಯುಷ್ಮಾನ್ ಸಹಕಾರ್ ಯೋಜನೆ ಆರೋಗ್ಯ ಸೇವೆಗಳಲ್ಲಿ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪರಿವರ್ತನೆ ತರುವ ಗುರಿಯನ್ನು ಹೊಂದಿದೆ. ಆರೋಗ್ಯ ಸೌಲಭ್ಯಗಳ ಕಾರ್ಯಾಚರಣೆಯ ಅವಶ್ಯಕತೆಗಳನ್ನು ಪೂರೈಸಲು ಈ ಯೋಜನೆಯು ಕಾರ್ಯನಿರತ ಬಂಡವಾಳ ಮತ್ತು ಮಾರ್ಜಿನ್ ಮನಿ ಅನ್ನು ಸಹ ಒದಗಿಸುತ್ತದೆ. ಇದು ಮಹಿಳಾ ಬಹುಸಂಖ್ಯಾತ ಸಹಕಾರಿ ಸಂಸ್ಥೆಗಳಿಗೆ ಒಂದು ಶೇಕಡಾ ಬಡ್ಡಿ ಸಬ್ವೆನ್ಶನ್ ಅನ್ನು ಒದಗಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.