ಬೆಂಗಳೂರು: ಕನಕಪುರದ ಕಪಾಲ ಬೆಟ್ಟದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಹಿಂದೆ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಮಂತ್ರಿಯಾಗಿದ್ದ ಡಿ.ಕೆ ಶಿವಕುಮಾರ್, ಕಪಾಲ ಬೆಟ್ಟದಲ್ಲಿ ಸುಮಾರು 80 ಅಡಿ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ 10 ಎಕರೆ ಗೋಮಾಳ ಭೂಮಿಯನ್ನು ಮುಂಜೂರು ಮಾಡಿಸಿದ್ದರು. ಉಚಿತವಾಗಿ ಸರ್ಕಾರದಿಂದ ಭೂಮಿ ಪಡೆದರೆ ಮುಂದೊಮ್ಮೆ ಸಮಸ್ಯೆ ಎದುರಾಗಬಹುದೆಂಬ ಭಯದಲ್ಲಿ ತಾವೇ 10.80 ಲಕ್ಷ ರೂ. ಗಳನ್ನು ಕಟ್ಟಿ ಕಪಾಲಬೆಟ್ಟ ಅಭಿವೃದ್ಧಿ ಸಮಿತಿಗೆ ಭೂಮಿ ಮಂಜೂರು ಮಾಡಿಸಿದ್ದರು.
ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾರೋಬೆಲೆ ಗ್ರಾಮದ ನಿವಾಸಿಯಾದ ಅಂಥೋಣಿ ಸ್ವಾಮಿ ಸೇರಿದಂತೆ 8 ಮಂದಿ ಗೋಮಾಳ ಜಮೀನು ಮಂಜೂರಿಗೆ ವಿರೋಧ ವ್ಯಕ್ತಪಡಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಡಿಕೆಶಿ ಮತ್ತು ಅವರ ಸಹೋದರ ಡಿ ಕೆ ಸುರೇಶ್ ಬರೆದ ಪತ್ರ ಆಧರಿಸಿ ಈ ಪಿಐಎಲ್ ಸಲ್ಲಿಸಲಾಗಿತ್ತು. ಯಾವುದೇ ಕ್ರೈಸ್ತ ಧರ್ಮದ ಜನರು ಜಾಗಕ್ಕೆ ಮನವಿ ಸಲ್ಲಿಸದಿದ್ದರೂ, ಡಿಕೆಶಿ ಸಹೋದರರು ಮತಬ್ಯಾಂಕ್, ರಾಜಕೀಯಕ್ಕಾಗಿ ಜಮೀನು ಮಂಜೂರು ಮಾಡಿದ್ದಾರೆ. ಈ ಪ್ರದೇಶವನ್ನು ಗೋಮಾಳಕ್ಕಾಗಿ ಮೀಸಲಿಡಲಾಗಿದೆ. ಇದನ್ನು ರಾಜಕೀಯಕ್ಕೆ ಬಳಸಬಾರದು. ಇದನ್ನು ಖಾಸಗಿ ವ್ಯಕ್ತಿಗಳ ಮತ್ತು ಧಾರ್ಮಿಕ ವಿಚಾರಕ್ಕೂ ಬಳಕೆ ಮಾಡಬಾರದು ಎಂದು ಕೋರ್ಟ್ಗೆ ಅರ್ಜಿದಾರರು ಮನವಿ ಮಾಡಿದ್ದರು.
ಪಿಐಎಲ್ನಲ್ಲಿ ಟ್ರಸ್ಟ್ಗೆ ಮಂಜೂರಾಗಿರುವ ಜಮೀನು ರದ್ದು ಮಾಡುವಂತೆಯೂ ಅರ್ಜಿದಾರರು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಪ್ರದೇಶದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಮಧ್ಯಂತರ ಆದೇಶ ಹೊರಡಿಸಿದೆ. ಪ್ರತಿವಾದಿಗಳಿಗೂ, ಕಪಾಲ ಬೆಟ್ಟ ಅಭಿವೃದ್ಧಿ ಟ್ರಸ್ಟ್ಗೂ ಕೋರ್ಟ್ ಈ ಸಂಬಂಧ ನೊಟೀಸ್ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.