ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನ ಕರೋನವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ವಿಳಂಬವಾಗಿದೆ, ಆದರೆ ಅದನ್ನು ಇನ್ನು ಮುಂದೆ ಅತಿ ಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹೇಳಿದ್ದಾರೆ.
ನಮ್ಮ ಪಕ್ಷವು ಸಿಎಎ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಸಿಎಎ ಈಗಾಗಲೇ ಸಂಸತ್ತಿನಲ್ಲಿ ಅನುಷ್ಠಾನಗೊಂಡಿದೆ. ಇದರ ಪ್ರಯೋಜನವನ್ನು ಎಲ್ಲರೂ ಪಡೆಯಲಿದ್ದಾರೆ. ಇದಕ್ಕೆ ನಾವು ಬದ್ಧವಾಗಿದ್ದೇವೆ. ದೇಶದಾದ್ಯಂತ ಅದರ ಅನುಷ್ಠಾನ ನಡೆಯಲಿದೆ. ಇದರ ಅಡಿಯಲ್ಲಿ ಅರ್ಹ ಜನರಿಗೆ ಭಾರತದ ಪೌರತ್ವ ಸಿಗಲಿದೆ ಕೇವಲ ಕೊರೋನಾ ಕಾರಣದಿಂದಾಗಿ ಇದು ವಿಳಂಬವಾಗಿದೆ” ಎಂದಿದ್ದಾರೆ.
ಕರೋನವೈರಸ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಅವರು, ಪ್ರಸ್ತುತ ಸನ್ನಿವೇಶ ಸುಧಾರಿಸುತ್ತಿದೆ. ಹೀಗಾಗಿ ಸಿಎಎ ಅನುಷ್ಠಾನ ಆರಂಭವಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.