ಬೆಂಗಳೂರು: ಕರ್ನಾಟಕ ಅಂತರ್ಜಲ ಪ್ರಾಧಿಕಾರವು ಕರ್ನಾಟಕ ಅಂತರ್ಜಲ ಅಧಿನಿಯಮ 2011 ಮತ್ತು ನಿಯಮಾವಳಿ 2012 ರ ಅನುಸಾರ ಅತಿಯಾಗಿ ಅಂತರ್ಜಲ ಬಳಕೆ ಮಾಡುವ ತಾಲೂಕುಗಳೆಂದು 45 ತಾಲೂಕುಗಳನ್ನು ಗುರುತಿಸಿದೆ.
ಬಾವಿ, ಕೊಳವೆಬಾವಿಯನ್ನು ಅನಧಿಕೃತವಾಗಿ ತೆರೆಯುವುದಕ್ಕೆ ನಿರ್ಬಂಧ ಹೇರಲು ಸಂಬಂಧಿಸಿದಂತೆ 15 ಜಿಲ್ಲೆಗಳ 45 ತಾಲೂಕುಗಳಿಗೆ ಸಂಬಂಧಿಸಿದಂತೆ ಈ ಅಧಿಸೂಚನೆ ಹೊರಡಿಸಲಾಗಿದೆ. ಸೂಚಿಸಲಾದ ಪ್ರದೇಶಗಳಲ್ಲಿ ಬಾವಿ, ಕೊಳವೆ ಬಾವಿ ತೆರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆಯೂ ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜೊತೆಗೆ ಅಂತರ್ಜಲ ಬಳಕೆದಾರರು ಸಹ ಕಡ್ಡಾಯವಾಗಿ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದೆ.
ಜಿಲ್ಲಾ ಮಟ್ಟದ ಸಮಿತಿಯಿಂದ ಅನುಮತಿಯನ್ನು ಪಡೆಯದೇ ಬಾವಿ, ಕೊಳವೆ ಬಾವಿಯನ್ನು ತೆರೆಯುವವರು ಯಾವುದೇ ರೀತಿಯ ಹಣಕಾಸಿನ ನೆರವು, ವಿದ್ಯುತ್ ಸಂಪರ್ಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಅರ್ಹರಲ್ಲ. ಅಲ್ಲದೆ ಅನುಮತಿ ಪಡೆಯದೇ ಕೊಳವೆ ಬಾವಿ, ಬಾವಿ ತೋಡಿಸಿದಲ್ಲಿ ಅವರು ಅಧಿನಿಯಮದ ಪ್ರಕರಣ 32 ರಂತೆ ಶಿಕ್ಷೆಗೆ ಅರ್ಹರಾಗಿರುತ್ತಾರೆ ಎಂದೂ ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಪೂರಕ ಮಾಹಿತಿ ಪಡೆಯಲು ಆಯಾ ಜಿಲ್ಲೆಯ ಭೂ ವಿಜ್ಞಾನಿಗಳು, ಸರ್ಕಾರದ ಅಂತರ್ಜಲ ಕರ್ನಾಟಕ ವೆಬ್ಸೈಟ್ಗೆ ಭೇಟಿ ನೀಡುವಂತೆಯೂ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪಟ್ಟಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೋಲಾರ, ರಾಮನಗರ,ತುಮಕೂರು ಜಿಲ್ಲೆಗಳ ತಾಲೂಕುಗಳಿಗೆ ಸಂಬಂಧಿಸಿದಂತೆ ಈ ಅಧಿಸೂಚನೆ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.