ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಮಂಡಳಿಯು ನಡೆಸುವ ಸಿ ಎ (ಚಾರ್ಟೆಡ್ ಅಕೌಂಟೆಂಟ್) ಫೌಂಡೇಶನ್ ಕೋರ್ಸ್ಗೆ ಹತ್ತನೇ ತರಗತಿ ಮುಗಿಸಿದ ಆಸಕ್ತ ವಿದ್ಯಾರ್ಥಿಗಳು ತಾತ್ಕಾಲಿಕ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಪೂರಕವಾದಂತೆ ತನ್ನ ನಿಯಮಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಂಡಳಿ ಮಾಡಿಕೊಂಡಿದೆ. ಸದ್ಯ ಹತ್ತನೇ ತರಗತಿ ಮುಗಿಸಿ ತಾತ್ಕಾಲಿಕ ನೆಲೆಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು 12ನೇ ತರಗತಿ ಸಂಪೂರ್ಣಗೊಳಿಸಿದ ಬಳಿಕವಷ್ಟೇ ತಮ್ಮ ಪ್ರವೇಶವನ್ನು ಅಧಿಕೃತಗೊಳಿಸುತ್ತಾರೆ ಎಂದು ಮಂಡಳಿ ತಿಳಿಸಿದೆ. ಈ ನಿಯಮದನ್ವಯ ಸಿಎ ಅಧ್ಯಯನಕ್ಕೆ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಪ್ರಸ್ತುತ ಅಧ್ಯಯನ ಸಂಪೂರ್ಣಗೊಳಿಸಲು ತೆಗೆದುಕೊಳ್ಳುವ ಅವಧಿಗೂ ಆರು ತಿಂಗಳು ಮೊದಲೇ ಕೋರ್ಸ್ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಐಸಿಎಐಯ ಅಧ್ಯಕ್ಷ ಅತುಲ್ ಕುಮಾರ್ ಗುಪ್ತಾ, ಈ ನಿಯಮಗಳ ತಿದ್ದುಪಡಿಗಾಗಿ ಚಾರ್ಟೆಡ್ ಅಕೌಂಟೆಂಟ್ ರೆಗ್ಯುಲೇಶನ್ ಆ್ಯಕ್ಟ್ 1988 ರ 25 ಇ, 25 ಎಫ್, 28 ಎಫ್ ಗಳಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.