ಬೆಂಗಳೂರು: ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧಗಳಲ್ಲಿನ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಆದೇಶಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ವಿಧಾನ ಸೌಧ, ವಿಕಾಸ ಸೌಧ, ಎಂ ಎಸ್ ಕಟ್ಟಡದ ಸಿಬ್ಬಂದಿಗಳು ಎಲ್ಲೆಂದರಲ್ಲಿ ಕಸ ಎಸೆಯುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ. ಸ್ವಚ್ಛತೆಗೆ ಸಂಬಂಧಿಸಿದಂತೆ ಸರ್ಕಾರ ಎರಡು ಆದೇಶಗಳನ್ನು ಹೊರಡಿಸಿದ್ದು, ಮೊದಲ ಸುತ್ತೋಲೆಯಲ್ಲಿ ಕಟ್ಟಡದ ಮಹಡಿಗಳ ಮೇಲೆ ನಿಂತು ಕಸ ಕೆಳಕ್ಕೆ ಎಸೆಯದಂತೆ ಸರ್ಕಾರ ಸೂಚಿಸಿದೆ. ರಾಜ್ಯದಲ್ಲಿ ಕೊರೋನಾ ಸಂಕಷ್ಟದ ಪರಿಸ್ಥಿತಿ ಇದೆ. ಆದ್ದರಿಂದ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದು, ಆಹಾರದ ಕವರ್ಗಳನ್ನು ಎಸೆಯುವುದರಿಂದ ಪರಿಸರವೂ ಹಾಳಾಗುತ್ತದೆ. ಹಾಗಾಗಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಹೇಳಿದೆ.
ಇನ್ನೊಂದು ಸುತ್ತೋಲೆಯಲ್ಲಿ ನವರಾತ್ರಿಯ ಆಯುಧ ಪೂಜಾ ಸಂದರ್ಭದಲ್ಲಿ ರಾಸಾಯನಿಕ ಬಣ್ಣದ ಬಳಕೆ ಮಾಡದಂತೆಯೂ ಸರ್ಕಾರ ಸೂಚಿಸಿದೆ. ರಾಸಾಯನಿಕ ಬಣ್ಣ ಬಳಸಿದ ರಂಗೋಲಿ, ಕುಂಬಳಕಾಯಿಗಳನ್ನು ಬಳಕೆ ಮಾಡಿ ಪರಿಸರದ ಮೇಲೆ, ಕಟ್ಟಡದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡದಂತೆಯೂ ಸರ್ಕಾರ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.