ನವದೆಹಲಿ: ದೇಶದ ಪವಿತ್ರ ಯಾತ್ರಾ ಸ್ಥಳವಾದ ಬದರಿನಾಥ ಮತ್ತು ಹಿಮಾಲಯ ತಪ್ಪಲಿನ ಸುತ್ತಮುತ್ತಲಿನ ಧಾರ್ಮಿಕ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 424 ಕೋಟಿ ರೂ. ಗಳನ್ನು ಮೀಸಲಿಟ್ಟಿದ್ದು, ಈ ಯೋಜನೆಯ ಮಾಸ್ಟರ್ ಪ್ಲ್ಯಾನ್ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆಗಾಗಿ ಕಾಯುತ್ತಿದೆ.
ಈ ಸಂಬಂಧ ಉತ್ತರಾಖಂಡ್ನ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ದಿಲೀಪ್ ಜವಾಲ್ಕರ್ ಅವರು ಪ್ರಸ್ತಾವನೆಯಲ್ಲಿರುವ ವಿಚಾರಗಳನ್ನು ಸ್ಥಳೀಯರ ಜೊತೆಗೆ ನಡೆಸಿದ ಸಭೆಯ ಸಂದರ್ಭದಲ್ಲಿ ಹಂಚಿಕೊಂಡರು. ದೇಗುಲಗಳ ಸುತ್ತಲೂ ಭಕ್ತರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಸಂಬಂಧ ಅವರು ಮಾಹಿತಿ ನೀಡಿದರು. ದೇವಾಲಯ ಟೌನ್ಶಿಪ್ನಲ್ಲಿರುವ ಆಧ್ಯಾತ್ಮಿಕ ಸ್ವರೂಪಕ್ಕೆ ಧಕ್ಕೆಯಾಗದಂತೆ ಈ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯ ಯೋಜನೆಯ ಪ್ರಕಾರ ಮೂರು ಹಂತಗಳಲ್ಲಿ ದೇವಾಲಯಗಳ ಅಭಿವೃದ್ಧಿ ಕಾರ್ಯ ನಡೆಯಲಿದೆ. ಮೊದಲ ಹಂತದಲ್ಲಿ ಶೇಷ ನೇತ್ರ ಸರೋವರ ಮತ್ತು ವಿಷ್ಣು ದೇಗುಲದ ಹತ್ತಿರದ ಬದ್ರಿಷ್ ಸರೋವರಗಳ ಅಭಿವೃದ್ಧಿ, ಎರಡನೇ ಹಂತದಲ್ಲಿ ದೇವಾಲಯದ ಆವರಣ ವಿಸ್ತರಣೆ, ನವೀಕರಣ ಮತ್ತು ಮೂರನೇಯ ಹಂತದಲ್ಲಿ ಶೇಷ ನೇತ್ರ ಸರೋವರದಿಂದ ದೇಗುಲದ ವರೆಗೆ ಅಷ್ಟಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.