ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಇತ್ತೀಚಿಗಷ್ಟೇ ಭಯೋತ್ಪಾದನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳ ಮುಂದೆ ಇಂದು ಶರಣಾಗತಿಯನ್ನು ಸ್ವೀಕರಿಸಿದ್ದಾರೆ.
ಈ ಇಬ್ಬರು ಉಗ್ರರ ಕುಟುಂಬಿಕರನ್ನು ಎನ್ಕೌಂಟರ್ ಪ್ರದೇಶಕ್ಕೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಉಗ್ರರು ಶರಣಾಗುವಂತೆ ಮಾಡುವುದೇ ಕುಟುಂಬಿಕರನ್ನು ಕರೆದುಕೊಂಡು ಬರಲು ಕಾರಣವಾಗಿತ್ತು. ಕೊನೆಗೂ ಪೊಲೀಸರ ಪ್ರಯತ್ನ ಸಫಲವಾಗಿದೆ.
ಶರಣಾದ ಇಬ್ಬರು ಉಗ್ರರನ್ನು ಅಬಿದ್ ಮತ್ತು ಮೆಹ್ರಾಜ್ ಎಂದು ಗುರುತಿಸಲಾಗಿದೆ. ಇವರು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆಯ ಮುಂದೆ ಶರಣಾಗತಿಯನ್ನು ಸ್ವೀಕರಿಸಿದ್ದಾರೆ.
ಭಯೋತ್ಪಾದನೆಯ ಹಾದಿ ಹಿಡಿದ ಯುವಜನತೆಗೆ ಮರಳಿ ಸಮಾಜದ ಮುಖ್ಯವಾಹಿನಿಗೆ ಬಂದು ಬದುಕು ಕಟ್ಟಿಕೊಳ್ಳಲು ಬೇಕಾದ ಎಲ್ಲಾ ನೆರವುಗಳನ್ನು ಭಾರತೀಯ ಸೇನೆ ಒದಗಿಸುತ್ತಿದೆ. ಇಂತಹ ಯುವಕರ ಮನೆಯವರನ್ನು ಸಂಪರ್ಕಿಸಿ ಅವರ ಮೂಲಕ ಉಗ್ರರ ಮನವೊಲಿಸುವ ಕಾರ್ಯವನ್ನು ಕೂಡ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಸೇನೆಯ ಈ ಪ್ರಯತ್ನ ಫಲಿತಾಂಶ ನೀಡಲು ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.