ಸಸರಾಂ: ಬಿಹಾರ ವಿಧಾನಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ತಮ್ಮ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದು ಅವರು ತಮ್ಮ ಮೊದಲ ಭಾಷಣವನ್ನು ಸಸಾರಾಂನಲ್ಲಿ ನಡೆಸಿದ್ದಾರೆ.
“ಬಿಹಾರದ ಜನತೆ ಚುನಾವಣೆಗೂ ಮೊದಲೇ ಬಿಜೆಪಿ ಪಕ್ಷದ ಮೇಲೆ ಭರವಸೆಯನ್ನು ಇಟ್ಟಿದ್ದಾರೆ. ಎಲ್ಲಾ ಸಮೀಕ್ಷೆಗಳು ಕೂಡ ಎನ್ಡಿಎ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ ಎಂಬುದನ್ನು ತೋರಿಸಿದೆ” ಎಂದಿದ್ದಾರೆ.
ಸಸಾರಂ ಬಳಿಕ ಗಯಾದಲ್ಲಿ ಮೋದಿ ಎರಡನೇ ಭಾಷಣವನ್ನು ಮಾಡಿದ್ದಾರೆ. “ಮಹಾಘಟಬಂಧನ್ ನಕ್ಸಲರನ್ನು ಬೆಂಬಲಿಸುತ್ತಿದೆ, ಬಿಹಾರದ ಸಬಲೀಕರಣಕ್ಕೆ ಎನ್ಡಿಎ ಬದ್ಧವಾಗಿದೆ” ಎಂದಿದ್ದಾರೆ.
“ಗಯಾದಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಿದ್ದೇವೆ. ಇಂಟರ್ನೆಟ್, ಮೊಬೈಲ್ ಸಂಪರ್ಕದಂತಹ ಕಾರ್ಯಗಳು ನಡೆದಿವೆ. ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಗಯಾವನ್ನು ವಿಶ್ವದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ” ಎಂದಿದ್ದಾರೆ.
“ಕಳೆದ ಕೆಲವು ವರ್ಷಗಳಲ್ಲಿ, ದೇಶದಲ್ಲಿ ನಕ್ಸಲರ ಚಟುವಟಿಕೆಗಳನ್ನು ಸೀಮಿತಗೊಳಿಸಲು ಸಾಕಷ್ಟು ಪ್ರಯತ್ನಗಳು ಮತ್ತು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಕ್ಸಲ್ ಉಪಸ್ಥಿತಿಯನ್ನು ಈಗ ಸೀಮಿತ ಪ್ರದೇಶಗಲ್ಲಿ ಮಾತ್ರ ಇದೆ” ಎಂದಿದ್ದಾರೆ.
ಗಯಾದ ಬಳಿಕ ಮೋದಿ ಬಗಲ್ಪುರದಲ್ಲಿ ಮೋದಿ ಸಾರ್ವಜನಿಕ ಪ್ರಚಾರ ಸಭೆಯನ್ನು ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.