ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಕರ್ನಾಟಕ ಹೂಡಿಕೆದಾರರಿಗೆ ಆದ್ಯತೆಯ ರಾಜ್ಯವಾಗಿದೆ. 2020 ರ ಎಪ್ರಿಲ್-ಜೂನ್ ತಿಂಗಳುಗಳಲ್ಲಿ ದೇಶದ ಇತರ ರಾಜ್ಯಗಳಿಗಿಂತ ಹೆಚ್ಚಿನ ಹೂಡಿಕೆ ರಾಜ್ಯದಲ್ಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಮೂರೇ ತಿಂಗಳಲ್ಲಿ ರಾಜ್ಯದಲ್ಲಿ ಸುಮಾರು 10,255 ಕೋಟಿ ರೂ. ಹೂಡಿಕೆಯಾಗಿದೆ. ಕೊರೋನಾ ಸವಾಲಿನ ನಡುವೆಯೂ ವಿದೇಶೀ ನೇರ ಹೂಡಿಕೆಗಳನ್ನು ರಾಜ್ಯ ಸೆಳೆದಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ದೇಶದ ಮೊದಲ ಗ್ರಾಹಕ ಎಲೆಕ್ಟ್ರಾನಿಕ್ ಮತ್ತು ಸರಕುಗಳ ಕ್ಲಸ್ಟರ್ 3,540 ಕೋಟಿ ರೂ. ಹೂಡಿಕೆಯಾಗಿ ತಲೆ ಎತ್ತಲಿದೆ. ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತದ ಪರಿಕಲ್ಪನೆಯಂತೆ ವಿಶ್ವ ದರ್ಜೆಯ ಸೌಲಭ್ಯಗಳ ಜೊತೆಗೆ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸಂಶೋಧನೆ ಮತ್ತು ಹೊಸತನಗಳನ್ನು ಪ್ರೋತ್ಸಾಹಿಸುತ್ತಲೇ ಬಂದಿದೆ. ಕರ್ನಾಟಕದ 15 ವಿಭಿನ್ನ ಕಾರ್ಯಕ್ಷೇತ್ರಗಳ ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದು, ರಾಜ್ಯ ಕೈಗಾರಿಕೆಗಳಿಗೆ ಪ್ರಾಶಸ್ತ್ಯ ನೀಡುತ್ತಿರುವುದಕ್ಕೆ ನಿದರ್ಶನ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್ಡಿಐ) ಆಕರ್ಷಿಸಿದೆ. ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ. (1/3)@PMOIndia @nsitharaman
— B.S. Yediyurappa (@BSYBJP) October 23, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.