ಬೆಂಗಳೂರು: ಕೊರೋನಾ ಸಂಕಷ್ಟ ರಾಜ್ಯದಲ್ಲಿ ಭೀಕರ ಪರಿಣಾಮವನ್ನು ಉಂಟುಮಾಡಿದೆ. ಒಂದು ಕಡೆಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಸೋಂಕು, ಇನ್ನೊಂದೆಡೆ ಕೊರೋನಾ ಸೋಂಕು ಇದೆಯೋ ಇಲ್ಲವೋ ಎಂಬಷ್ಟರ ಮಟ್ಟಿಗೆ ನಿರಾಳವಾಗಿ ಯಾವುದೇ ಮುಂಜಾಗ್ರತಾ ಕ್ರಮವನ್ನು ಅನುಸರಿಸದೆ ಓಡಾಡುತ್ತಿರುವ ಜನರು. ಇಂತಹ ಸ್ಥಿತಿಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಎಲ್ಲಾ ಮಾರ್ಗಗಳನ್ನು ಅನುಸರಿಸುತ್ತಿದೆ. ಸದ್ಯ ಕೆಎಸ್ಆರ್ಟಿಸಿ ಬಸ್ಸುಗಳ ಟಿಕೆಟ್ಗಳಲ್ಲಿಯೂ ಕೊರೋನಾ ಜಾಗೃತಿ ಬರಹಗಳನ್ನು ಪ್ರಕಟಿಸುವ ಮೂಲಕ ಸರ್ಕಾರ, ಆರೋಗ್ಯ ಇಲಾಖೆ, ಸಾರಿಗೆ ಸಂಸ್ಥೆ ಜನರಲ್ಲಿ ಎಚ್ಚರಿಕೆ ಮೂಡಿಸುವಲ್ಲಿ ಹೆಜ್ಜೆ ಇಟ್ಟಿದೆ.
ರಾಜ್ಯದ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿಯ ಎಲ್ಲಾ ಬಸ್ಸುಗಳಲ್ಲಿ ನೀಡುವ ಟಿಕೆಟ್ಗಳಲ್ಲಿ ಕೊರೋನಾ ಜಾಗೃತಿ ಬರಹಗಳನ್ನು ಪ್ರಕಟಿಸಲಾಗಿದೆ. ಟಿಕೇಟ್ ಗಳಲ್ಲಿ ‘ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’, ‘ಆರಂಭಿಕ ಕೋವಿಡ್-19 ಪರೀಕ್ಷೆ ಜೀವ ಉಳಿಸುತ್ತದೆ’ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಆ ಮೂಲಕ ಕೊರೋನಾದಿಂದ ಜನತೆ ಹೇಗೆ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವುದು ಸಾಧ್ಯ ಎಂಬ ಜನಜಾಗೃತಿ ಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ರಾಜ್ಯದ ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿ ಅನೇಕ ಮಂದಿ ಬಡವರು, ಮಧ್ಯಮ ವರ್ಗದ ಜನರು ಪ್ರಯಾಣ ನಡೆಸುತ್ತಾರೆ. ಸಾರ್ವಜನಿಕ ಸಾರಿಗೆಯನ್ನೇ ನೆಚ್ಚಿಕೊಂಡವರಿಗೆ ತಮ್ಮ ಆರೋಗ್ಯವನ್ನು ಕೊರೋನಾ ಸೋಂಕಿನಿಂದ ಕಾಪಾಡಿಕೊಳ್ಳುವುದು ಹೇಗೆ ಎಂಬುದರ ಅರಿವು ಮೂಡಿಸಲು ಹುಡುಕಿಕೊಂಡ ದಾರಿ ನಿಜಕ್ಕೂ ಮಾದರಿ. ಇದು ಸಾಮಾನ್ಯರಲ್ಲಿ ಸಾಮಾನ್ಯರನ್ನು ತಲುಪುವುದು ಸಾಧ್ಯ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.