ನವದೆಹಲಿ: ಮದರಸಾಗಳನ್ನು ಬಲಪಡಿಸುವ ಮತ್ತು ಆಧುನೀಕರಿಸುವ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸಲಹಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಸಚಿವಾಲಯವು ಮದರಸಾಗಳನ್ನು ಬಲಪಡಿಸುವ / ಆಧುನೀಕರಿಸುವ ಬಗ್ಗೆ ವಿವರವಾದ ಪರಿಕಲ್ಪನಾ ಟಿಪ್ಪಣಿಯನ್ನು ಅಧ್ಯಯನ ಮಾಡಲು ಮತ್ತು ತಯಾರಿಸಲು ಅಕ್ಟೋಬರ್ 15 ರಂದು ಟೆಂಡರ್ ಆಹ್ವಾನಿಸಿದೆ ಮತ್ತು ಟೆಂಡರ್ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 2 ಆಗಿದೆ.
ಶಿಕ್ಷಣವು ಮುಸ್ಲಿಂ ಸಮುದಾಯಕ್ಕೆ ಕಾಳಜಿಯ ಕ್ಷೇತ್ರವಾಗಿದೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮದರಸದಲ್ಲಿ ಆಧುನಿಕ ಶಿಕ್ಷಣ ನೀಡುವುದರಿಂದ ಭಾರತದಲ್ಲಿ ಮುಸ್ಲಿಂ ಸಮುದಾಯದ ಹೆಚ್ಚಿನ ಸಂಖ್ಯೆಯ ಮಕ್ಕಳು ಶಿಕ್ಷಣಕ್ಕಾಗಿ ಮದರಸಾಗಳಿಗೆ ಹಾಜರಾಗಬಹುದು ಎಂದು ತಿಳಿದುಬಂದಿದೆ.
ದೇಶದ ಬಹುತೇಕ ಮದರಸಗಳಲ್ಲಿ ಔಪಚಾರಿಕ ಶಿಕ್ಷಣದ ಪಠ್ಯ ಕ್ರಮಗಳನ್ನು ಅನುಸರಿಸಲಾಗುತ್ತಿಲ್ಲ, ನುರಿತ ಶಿಕ್ಷಕರು ಕೂಡ ಅಲ್ಲಿ ಇಲ್ಲ. ಹೀಗಾಗಿ ಮದರಸಾಗಳನ್ನು ಆಧುನೀಕರಣಗೊಳಿಸಿ ಅಲ್ಲಿ ಔಪಚಾರಿಕ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸುವ ಮಹತ್ವದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.